swami madduru
ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…