ಮಂಡ್ಯ

ಮದ್ದೂರು| ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಸ್.ಪಿ.ಸ್ವಾಮಿ

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ‌. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

20 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

40 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

1 hour ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 hours ago