swami madduru
ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…