swami madduru
ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…