ಮದ್ದೂರು: ಗಾಂಜಾ ಮಾರಾಟ ಮಾಡಲು ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಾಲೂಕಿನ ಹೊಸಗಾವಿಯಲ್ಲಿ ಬಂದಿಸಿದ್ದಾರೆ.
ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಎ.ಸಿ. ಭರತ್ ಎಂಬ ಯುವಕನನ್ನು ಬಂದಿಸಿದ್ದು, ಈತನಿಂದ 310 ಗ್ರಾಂ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಗಾಂಜಾ ಸೊಪ್ಪು ಸಂಗ್ರಹಿಸಿ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ, ಉಪ ಆಯುಕ್ತರು ಹಾಗೂ ಮಂಡ್ಯ ವಿಭಾಗದ ಅಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು ಹೊಸಗಾವಿ ಗ್ರಾಮದ ದೇವಾಲಯದ ಬಳಿ ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಭರತ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನ ಎನ್ ಡಿ ಪಿ ಎಸ್ ಕಾಯ್ದೆ ನಿಯಮಾನುಸಾರ ಬಂಧಿಸಿದ್ದು. ಅಬಕಾರಿ ನಿರೀಕ್ಷಕ ಪ್ರೇಮ್ ಸಾಗರ್ ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಬಕಾರಿ ಇಲಾಖೆಯ ಸಿಬ್ಬಂದಿಗಳಾದ ಮುತ್ತುರಾಜು ನವೀನ್ ಕುಮಾರ್ ಚಂದ್ರಶೇಖರ್ ವಾಹನ ಚಾಲಕ ಸತೀಶ್ ಭಾಗಿಯಾಗಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…