ಮಂಡ್ಯ

ಮದ್ದೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಯುವಕನ ಬಂಧನ

ಮದ್ದೂರು: ಗಾಂಜಾ ಮಾರಾಟ ಮಾಡಲು ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಾಲೂಕಿನ ಹೊಸಗಾವಿಯಲ್ಲಿ ಬಂದಿಸಿದ್ದಾರೆ.

ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಎ.ಸಿ. ಭರತ್ ಎಂಬ ಯುವಕನನ್ನು ಬಂದಿಸಿದ್ದು, ಈತನಿಂದ 310 ಗ್ರಾಂ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಗಾಂಜಾ ಸೊಪ್ಪು ಸಂಗ್ರಹಿಸಿ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ, ಉಪ ಆಯುಕ್ತರು ಹಾಗೂ ಮಂಡ್ಯ ವಿಭಾಗದ ಅಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು ಹೊಸಗಾವಿ ಗ್ರಾಮದ ದೇವಾಲಯದ ಬಳಿ ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಭರತ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನ ಎನ್ ಡಿ ಪಿ ಎಸ್ ಕಾಯ್ದೆ ನಿಯಮಾನುಸಾರ ಬಂಧಿಸಿದ್ದು. ಅಬಕಾರಿ ನಿರೀಕ್ಷಕ ಪ್ರೇಮ್ ಸಾಗರ್ ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಬಕಾರಿ ಇಲಾಖೆಯ ಸಿಬ್ಬಂದಿಗಳಾದ ಮುತ್ತುರಾಜು ನವೀನ್ ಕುಮಾರ್ ಚಂದ್ರಶೇಖರ್ ವಾಹನ ಚಾಲಕ ಸತೀಶ್ ಭಾಗಿಯಾಗಿದ್ದರು.

andolanait

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

1 hour ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

1 hour ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

1 hour ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

1 hour ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

1 hour ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

2 hours ago