ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್-2024 ಆವಾರ್ಡ್ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್ಚಾಂಟಿಂಗ್ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. ಅಲ್ಲದೇ ಇದೇ ವೇದಿಕೆಯಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸ್ರ್ ಎಂಬ ಗೌರವಕ್ಕೂ ಭಾಜನರಾಗಿದ್ದಾರೆ.
ಡಾ.ಪ್ರಿಯಾ ಅವರು ವೃತ್ತಿಯಲ್ಲಿ ಪಶು ವೈದ್ಯರಾಗಿದ್ದು, ಮೂಲತಃ ಪಂಜಾಬ್ ಮೂಲದವರಾಗಿದ್ದಾರೆ. ಇವರು ಗೋವಾದಲ್ಲಿ ಬೆಳೆದಿದ್ದು, ಮದ್ದೂರಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿದ್ದರಾಜು ಅವರ ಪುತ್ರ ಸಂಜಿತ್ ಅವರನ್ನು ವರಿಸಿದ್ದಾರೆ. ಸಂಜೀತ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉತ್ತರಾಖಂಡ್ನಲ್ಲಿ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ ಎಂದು ಕುಟುಂಬ ವರ್ಗದವರು ಮಾಹಿತಿ ನೀಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…