ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಅಡಗನಹಳ್ಳಿ ಗ್ರಾಮದ ಮಹದೇವಮ್ಮ, ಗುಡ್ಡೆದಪ್ಪ, ಗುಜ್ಜಮ್ಮ ಮೂರು ದೇವಾಲಯಗಳ ಬಾಗಿಲನ್ನು ಕಬ್ಬಿಣದ ಆಯುಧಗಳಿಂದ ಹೊಡೆದು ಒಳಪ್ರವೇಶಿಸಿರುವ ದುಷ್ಕರ್ಮಿಗಳು ದೇವರ ವಿಗ್ರಹಗಳ ಕೊರಳಿನಲ್ಲಿದ್ದ ತಾಳಿ, ಬೆಳ್ಳಿ ಪದಾರ್ಥಗಳು ಸೇರಿದಂತೆ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಗ್ರಾಮದಲ್ಲಿ ಗುರುವಾರ ಮಂಚಮ್ಮ ದೇವಾಲಯದ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವಿದ್ದು, ಅಪಾರ ಭಕ್ತರು ದೇವಾಲಯಗಳಿಗೆ ತೆರಳಿ ನಗದು, ಚಿನ್ನ, ಬೆಳ್ಳಿ ಪದಾರ್ಥಗಳನ್ನು ಹರಕೆ ರೂಪದಲ್ಲಿ ಸಲ್ಲಿಸಿದ್ದನ್ನು ಅರಿತಿದ್ದ ದುಷ್ಕರ್ಮಿಗಳು ಗುರುವಾರ ತಡರಾತ್ರಿ ಕೃತ್ಯ ಎಸಗಿದ್ದಾರೆ.
ಸುಮಾರು ೫ ಗ್ರಾಂ ಚಿನ್ನದ ತಾಳಿ ಸೇರಿದಂತೆ ಬೆಳ್ಳಿತಟ್ಟೆ, ದೇವರ ಸಾಮಾನುಗಳು ಇನ್ನಿತರೆ ಪದಾರ್ಥಗಳನ್ನು ಕಳವು ಮಾಡಿದ್ದು, ಹುಂಡಿಯಲ್ಲಿದ್ದ ಸುಮಾರು ೬
ಲಕ್ಷಕ್ಕೂ ಅಧಿಕ ನಗದನ್ನು ದೋಚಿದ್ದಾರೆ. ಹುಂಡಿಯನ್ನು ದೇವಾಲಯದಿಂದ ಸುಮಾರು ದೂರದವರೆಗೆ ಹೊತ್ತೊಯ್ದು ಜಮೀನೊಂದರಲ್ಲಿ ಬಿಸಾಡಿ ತೆರಳಿದ್ದಾರೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ನಾರಾಯಣಿ, ಕೆಸ್ತೂರು ಪಿ.ಎಸ್.ಐ. ಸೇರಿದಂತೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ
ಕೆಸ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…