ಮಂಡ್ಯ

ಮಂಡ್ಯದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ ಭೇಟಿ ರದ್ದು

ಮಂಡ್ಯಕೆ.ಆರ್‌.ಪೇಟೆ ತಾಲೂಕು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಭೇಟಿ ರದ್ದಾಗಿದೆ.

ಅ.13ರಿಂದ ಆರಂಭಗೊಂಡಿರುವ ಮಹಾಕುಂಭ ಮೇಳದ ಕಡೆಯ ದಿನವಾದ ಅ.16ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ ನಿಗದಿಯಾಗಿತ್ತು. ಮಂಡ್ಯ ಜಿಲ್ಲಾಡಳಿತದ ಪರವಾಗಿ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡರು ಯೋಗಿ ಅದಿತ್ಯನಾಥ್‌ ಅವರನ್ನು ಆಹ್ವಾನಿಸಿದ್ದರು. ಆದರೆ, ಕಳೆದೆರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ತಾವು ಕುಂಭಮೇಳಕ್ಕಾಗಿ ಕರ್ನಾಟಕಕ್ಕೆ ಬರಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಯೋಗಿ ಆದಿತ್ಯನಾಥ್‌ ಪತ್ರ ಬರೆದಿದ್ದಾರೆ. ಶುಕ್ರವಾರವೇ ಯೋಗಿ ಆದಿತ್ಯನಾಥ್‌ ಕುಂಭಮೇಳಕ್ಕೆ ಬರುವುದಿಲ್ಲವೆಂಬ ಸುದ್ದಿ ಹರಿದಾಡಿತ್ತು. ಶನಿವಾರ ಖಚಿತವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10ಕ್ಕೆ ಬೆಂಗಳೂರಿನಿಂದ ಕಾಪ್ಟರ್‌ನಲ್ಲಿ ಹೊರಟು, 10.50ಕ್ಕೆ ಅಂಬಿಗರಹಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿ, ನೂತನವಾಗಿ ನಿರ್ಮಿಸಿರುವ ಶ್ರೀಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು. ಬಳಿಕ ವೇದಿಕೆ ಕಾರ‍್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2ಕ್ಕೆ ಅಂಬಿಗರ ಹಳ್ಳಿಯಿಂದ ನಿರ್ಗಮಿಸಲಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಕ್ಷೇತ್ರದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹಾವೇರಿಯ ಕಾಗಿನಲೆ ಕನಕಗುರು ಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ, ಚಂದ್ರವನ ಆಶ್ರಮದ ಡಾ.ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀರವಿಶಂಕರ್‌ ಗುರೂಜಿ, ಗುಜರಾತ್‌ನ ಹಿಂದೂ ಧರ್ಮ ಆಚಾರ್ಯ ಸಭಾದ ಶ್ರೀಪರಮಾತ್ಮಾನಂದ ಸರಸ್ವರಿ ಸ್ವಾಮೀಜಿ ಸಾನಿಧ್ಯ ವಹಿಸುವರು

andolana

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

7 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

8 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

8 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

8 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

8 hours ago