ಮಂಡ್ಯ

ಮಂಡ್ಯದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ ಭೇಟಿ ರದ್ದು

ಮಂಡ್ಯಕೆ.ಆರ್‌.ಪೇಟೆ ತಾಲೂಕು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಭೇಟಿ ರದ್ದಾಗಿದೆ.

ಅ.13ರಿಂದ ಆರಂಭಗೊಂಡಿರುವ ಮಹಾಕುಂಭ ಮೇಳದ ಕಡೆಯ ದಿನವಾದ ಅ.16ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ ನಿಗದಿಯಾಗಿತ್ತು. ಮಂಡ್ಯ ಜಿಲ್ಲಾಡಳಿತದ ಪರವಾಗಿ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡರು ಯೋಗಿ ಅದಿತ್ಯನಾಥ್‌ ಅವರನ್ನು ಆಹ್ವಾನಿಸಿದ್ದರು. ಆದರೆ, ಕಳೆದೆರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ತಾವು ಕುಂಭಮೇಳಕ್ಕಾಗಿ ಕರ್ನಾಟಕಕ್ಕೆ ಬರಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಯೋಗಿ ಆದಿತ್ಯನಾಥ್‌ ಪತ್ರ ಬರೆದಿದ್ದಾರೆ. ಶುಕ್ರವಾರವೇ ಯೋಗಿ ಆದಿತ್ಯನಾಥ್‌ ಕುಂಭಮೇಳಕ್ಕೆ ಬರುವುದಿಲ್ಲವೆಂಬ ಸುದ್ದಿ ಹರಿದಾಡಿತ್ತು. ಶನಿವಾರ ಖಚಿತವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10ಕ್ಕೆ ಬೆಂಗಳೂರಿನಿಂದ ಕಾಪ್ಟರ್‌ನಲ್ಲಿ ಹೊರಟು, 10.50ಕ್ಕೆ ಅಂಬಿಗರಹಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿ, ನೂತನವಾಗಿ ನಿರ್ಮಿಸಿರುವ ಶ್ರೀಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು. ಬಳಿಕ ವೇದಿಕೆ ಕಾರ‍್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2ಕ್ಕೆ ಅಂಬಿಗರ ಹಳ್ಳಿಯಿಂದ ನಿರ್ಗಮಿಸಲಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಕ್ಷೇತ್ರದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹಾವೇರಿಯ ಕಾಗಿನಲೆ ಕನಕಗುರು ಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ, ಚಂದ್ರವನ ಆಶ್ರಮದ ಡಾ.ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀರವಿಶಂಕರ್‌ ಗುರೂಜಿ, ಗುಜರಾತ್‌ನ ಹಿಂದೂ ಧರ್ಮ ಆಚಾರ್ಯ ಸಭಾದ ಶ್ರೀಪರಮಾತ್ಮಾನಂದ ಸರಸ್ವರಿ ಸ್ವಾಮೀಜಿ ಸಾನಿಧ್ಯ ವಹಿಸುವರು

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago