ಮಂಡ್ಯ

ಮಹೇಶ್‌ ಜೋಶಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಎಸ್‌.ಬಸವರಾಜು

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ಅಧ್ಯಕ್ಷ ಬಸವರಾಜು.ಎಸ್ ಒತ್ತಾಯಿಸಿದರು.

ಇಂದು (ಫೆ.25) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹೇಶ್ ಜೋಶಿ ಉದ್ದಟತನ, ಸವಾರ್ಧಿಕಾರಿ ಧೋರಣೆ, ಕನ್ನಡ ನೆಲ, ಜಲ ಭಾಷೆಗಳಿಗೆ ಗೌರವ ತರುವಂತಹ ಎಳ್ಳಷ್ಟು ಕೆಲಸ ಮಾಡದೇ, ಕನ್ನಡ ಭಾಷೆ, ಸಾಹಿತ್ಯಕ್ಕೆ ಅಗೌರವ ತೋರುವವರಾಗಿದ್ದಾರೆ ಎಂದು ದೂಡಿದರು.

ಇದಕ್ಕೆ ಸಾಕ್ಷಿಯಾಗಿ ಅವರ ವಿರುದ್ಧ ನ್ಯಾಯಾಲಯ ದಂಡ ವಿಧಿಸಿ ತೀರ್ಪು ಹೊರಡಿಸಿದೆ. ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಎಂ.ಆರ್.ಕುಮಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು. ಇದೀಗ ಅವರು ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರೂ ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಅರ್ಹರು ಎಂದು ಹೇಳಿದರು.

ರಾಜೀನಾಮೆ ನೀಡಲು ಮಹೇಶ್ ಜೋಶಿ ಮತ್ತೇ ಉದ್ದಟನ ತೋರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದರೆ, ಕೇಂದ್ರ ಕಸಾಪ ಕಛೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಎನ್.ಶೇಖರ್, ಪ್ರಧಾನ ಕಾರ್ಯದರ್ಶಿ ಟಿ.ಎಂ.ನಾಗರಾಜು, ಸದಸ್ಯ ಹೆಚ್.ಪಿ.ವೈರಮುಡಿ, ರೋಸ್ ಮೇರಿ ಇದ್ದರು.

 

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

2 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

3 hours ago