ಮಂಡ್ಯ

ಮೈ-ಬೆಂ ಹೆದ್ದಾರಿ | ಮಂಡ್ಯ ಬಳಿ ಕಾರು ಅಪಘಾತ ; ಯುವಕ ಸಾವು

ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ.

ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ ನಿವಾಸಿ ಲೇ. ಸುರೇಂದ್ರ ಪ್ರಕಾಶ್ ಅವರ ಪುತ್ರ ತುಷಾರ್ ಪ್ರಕಾಶ್ (೨೦) ಮೃತ ಯುವಕನಾಗಿದ್ದು, ಕಾರಿನ ಚಾಲಕ ಪವನ್ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅ.೧ರ ಬುಧವಾರ ತಡರಾತ್ರಿ ದಸರಾ ನೋಡಲೆಂದು ಮೃತ ತುಷಾರ್ ಪ್ರಕಾಶ್ ಹಾಗೂ ಪವನ್ ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದಾರೆ. ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಮಂಡ್ಯ ತಾಲ್ಲೂಕು ಇಂಡುವಾಳು ಸಮೀಪ ಬರುತ್ತಿದ್ದಂತೆ ೧.೫೦ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಇದನ್ನು ಓದಿ :  ಮೈಸೂರು| ಸಾರಿಗೆ ಬಸ್‌ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ

ಈ ಘಟನೆಯಿಂದಾಗಿ ತುಷಾರ್ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಪವನ್ ತೀವ್ರವಾಗಿ ಗಾಯಗೊಂಡನು. ಕಾರು ಹೆದ್ದಾರಿಯಲ್ಲೇ ಉರುಳಿಬಿದ್ದ ಪರಿಣಾಮ ಕೆಲ ಸಮಯ ಸಂಚಾರದಲ್ಲಿ ಅಸ್ತವ್ಯಸ್ತವಾಯಿತು.

ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು, ಮೃತ ಯುವ ತುಷಾರ್ ಪ್ರಕಾಶ್ ಮೃತ ದೇಹ ಹಾಗೂ ತೀವ್ರವಾಗಿ ಗಾಯಗೊಂಡಿದ್ದ ಪವನ್‌ನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಗಾಯಾಳು ಪವನ್‌ಗೆ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

18 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

28 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago