ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ.
ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್ನ ನಿವಾಸಿ ಲೇ. ಸುರೇಂದ್ರ ಪ್ರಕಾಶ್ ಅವರ ಪುತ್ರ ತುಷಾರ್ ಪ್ರಕಾಶ್ (೨೦) ಮೃತ ಯುವಕನಾಗಿದ್ದು, ಕಾರಿನ ಚಾಲಕ ಪವನ್ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅ.೧ರ ಬುಧವಾರ ತಡರಾತ್ರಿ ದಸರಾ ನೋಡಲೆಂದು ಮೃತ ತುಷಾರ್ ಪ್ರಕಾಶ್ ಹಾಗೂ ಪವನ್ ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದಾರೆ. ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಮಂಡ್ಯ ತಾಲ್ಲೂಕು ಇಂಡುವಾಳು ಸಮೀಪ ಬರುತ್ತಿದ್ದಂತೆ ೧.೫೦ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಇದನ್ನು ಓದಿ : ಮೈಸೂರು| ಸಾರಿಗೆ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ
ಈ ಘಟನೆಯಿಂದಾಗಿ ತುಷಾರ್ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಪವನ್ ತೀವ್ರವಾಗಿ ಗಾಯಗೊಂಡನು. ಕಾರು ಹೆದ್ದಾರಿಯಲ್ಲೇ ಉರುಳಿಬಿದ್ದ ಪರಿಣಾಮ ಕೆಲ ಸಮಯ ಸಂಚಾರದಲ್ಲಿ ಅಸ್ತವ್ಯಸ್ತವಾಯಿತು.
ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು, ಮೃತ ಯುವ ತುಷಾರ್ ಪ್ರಕಾಶ್ ಮೃತ ದೇಹ ಹಾಗೂ ತೀವ್ರವಾಗಿ ಗಾಯಗೊಂಡಿದ್ದ ಪವನ್ನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಗಾಯಾಳು ಪವನ್ಗೆ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…