ಮಂಡ್ಯ

ಮೈ-ಬೆಂ ಹೆದ್ದಾರಿ | ಮಂಡ್ಯ ಬಳಿ ಕಾರು ಅಪಘಾತ ; ಯುವಕ ಸಾವು

ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ.

ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ ನಿವಾಸಿ ಲೇ. ಸುರೇಂದ್ರ ಪ್ರಕಾಶ್ ಅವರ ಪುತ್ರ ತುಷಾರ್ ಪ್ರಕಾಶ್ (೨೦) ಮೃತ ಯುವಕನಾಗಿದ್ದು, ಕಾರಿನ ಚಾಲಕ ಪವನ್ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅ.೧ರ ಬುಧವಾರ ತಡರಾತ್ರಿ ದಸರಾ ನೋಡಲೆಂದು ಮೃತ ತುಷಾರ್ ಪ್ರಕಾಶ್ ಹಾಗೂ ಪವನ್ ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದಾರೆ. ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಮಂಡ್ಯ ತಾಲ್ಲೂಕು ಇಂಡುವಾಳು ಸಮೀಪ ಬರುತ್ತಿದ್ದಂತೆ ೧.೫೦ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಇದನ್ನು ಓದಿ :  ಮೈಸೂರು| ಸಾರಿಗೆ ಬಸ್‌ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ

ಈ ಘಟನೆಯಿಂದಾಗಿ ತುಷಾರ್ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಪವನ್ ತೀವ್ರವಾಗಿ ಗಾಯಗೊಂಡನು. ಕಾರು ಹೆದ್ದಾರಿಯಲ್ಲೇ ಉರುಳಿಬಿದ್ದ ಪರಿಣಾಮ ಕೆಲ ಸಮಯ ಸಂಚಾರದಲ್ಲಿ ಅಸ್ತವ್ಯಸ್ತವಾಯಿತು.

ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು, ಮೃತ ಯುವ ತುಷಾರ್ ಪ್ರಕಾಶ್ ಮೃತ ದೇಹ ಹಾಗೂ ತೀವ್ರವಾಗಿ ಗಾಯಗೊಂಡಿದ್ದ ಪವನ್‌ನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಗಾಯಾಳು ಪವನ್‌ಗೆ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

12 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

12 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago