ಮಂಡ್ಯ

ಅಂಬೇಡ್ಕರ್ ಭವನವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.

ಇಂದು (ಜು.7) ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭವನದ ನಿರ್ಮಾಣದ ಗುಣಮಟ್ಟದಲ್ಲಿ ತೊಂದರೆ ಇದೆ ಎಂದು ದೂರು ಸಲ್ಲಿಕೆಯಾಗಿತ್ತು, ಇದನ್ನು ಪರಿಶೀಲಿಸಿ ವರದಿ ಸಲ್ಲಿಕೆಯಾಗಿದೆ ಎಂದರು.

ಸ್ವಚ್ಛತೆ ಕಪಾಡಿ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವವರು ಸ್ವಚ್ಛತೆಗೆ ಆದ್ಯತೆ ನೀಡಿ, ಭವನಕ್ಕೆ ಆಗಮಿಸುವ ವೀಕ್ಷಕರಿಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಿ, ಭವನದ ಹೊರ ಆವರಣ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣೆ 1 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದ್ದು, ಮೊದಲನೇಯ ಹಂತದಲ್ಲಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಮೊದಲ ಹಂತದಲ್ಲಿ, ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಕುರ್ಚಿಗಳು, ಟೇಬಲ್ ಗಳು, ಫ್ಯಾನ್ ಗಳನ್ನು ಹಾಗೂ ಮಿನಿ ಹಾಲ್, ಜನರೇಟರ್, ಪೆಯಿಂಟಿಂಗ್, ವಾಟರ್ ಲೀಕೇಜ್ ದುರಸ್ತಿ, ಸಣ್ಣ ಪುಟ್ಟ ಕೆಲಸಗಳು ಅವಶ್ಯಕವಾಗಿದ್ದು ಇದನ್ನು ಅನುದಾನದ ಹಣದಲ್ಲಿ ಸರಿಪಡಿಸಲಾಗುವುದು ಎಂದರು.

ಅಧಿಕಾರಿಗಳು ಸರಿಯಾದ ಯೋಜನೆ ರೂಪಿಸಿ ಸಮಿತಿಗೆ ತಿಳಿಸಿದ ನಂತರ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ವಾರದೊಳಗಾಗಿ ಯೋಜನೆ ಸಿದ್ಧ ಪಡಿ‌ಸಿ ಎಂದರು.

ಮುಂದಿನ ಅನುದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸೋಲಾರ್ ಅಳವಡಿಸುವ ಚಿಂತನೆಯಲ್ಲಿ ಇರುವುದಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ನಿರ್ಮಿತಿ ಕೇಂದ್ರದ ಜಯಪ್ರಕಾಶ್, ಡಾ.ಬಾಬು ಜಗಜೀವನರಾಂ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎನ್.ಆರ್. ಚಂದ್ರಶೇಖರ್, ಮುಖಂಡರುಗಳಾದ ಗುರು ಪ್ರಸಾದ್, ವೆಂಕಟಗಿರಿಯಯ್ಯ, ಮಹೇಶ್ ಕೃಷ್ಣ, ಎನ್.ಬಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

45 mins ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

2 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

4 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

5 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

6 hours ago