ಮಂಡ್ಯ

ಅಂಬೇಡ್ಕರ್ ಭವನವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.

ಇಂದು (ಜು.7) ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭವನದ ನಿರ್ಮಾಣದ ಗುಣಮಟ್ಟದಲ್ಲಿ ತೊಂದರೆ ಇದೆ ಎಂದು ದೂರು ಸಲ್ಲಿಕೆಯಾಗಿತ್ತು, ಇದನ್ನು ಪರಿಶೀಲಿಸಿ ವರದಿ ಸಲ್ಲಿಕೆಯಾಗಿದೆ ಎಂದರು.

ಸ್ವಚ್ಛತೆ ಕಪಾಡಿ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವವರು ಸ್ವಚ್ಛತೆಗೆ ಆದ್ಯತೆ ನೀಡಿ, ಭವನಕ್ಕೆ ಆಗಮಿಸುವ ವೀಕ್ಷಕರಿಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಿ, ಭವನದ ಹೊರ ಆವರಣ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣೆ 1 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದ್ದು, ಮೊದಲನೇಯ ಹಂತದಲ್ಲಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಮೊದಲ ಹಂತದಲ್ಲಿ, ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಕುರ್ಚಿಗಳು, ಟೇಬಲ್ ಗಳು, ಫ್ಯಾನ್ ಗಳನ್ನು ಹಾಗೂ ಮಿನಿ ಹಾಲ್, ಜನರೇಟರ್, ಪೆಯಿಂಟಿಂಗ್, ವಾಟರ್ ಲೀಕೇಜ್ ದುರಸ್ತಿ, ಸಣ್ಣ ಪುಟ್ಟ ಕೆಲಸಗಳು ಅವಶ್ಯಕವಾಗಿದ್ದು ಇದನ್ನು ಅನುದಾನದ ಹಣದಲ್ಲಿ ಸರಿಪಡಿಸಲಾಗುವುದು ಎಂದರು.

ಅಧಿಕಾರಿಗಳು ಸರಿಯಾದ ಯೋಜನೆ ರೂಪಿಸಿ ಸಮಿತಿಗೆ ತಿಳಿಸಿದ ನಂತರ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ವಾರದೊಳಗಾಗಿ ಯೋಜನೆ ಸಿದ್ಧ ಪಡಿ‌ಸಿ ಎಂದರು.

ಮುಂದಿನ ಅನುದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸೋಲಾರ್ ಅಳವಡಿಸುವ ಚಿಂತನೆಯಲ್ಲಿ ಇರುವುದಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ನಿರ್ಮಿತಿ ಕೇಂದ್ರದ ಜಯಪ್ರಕಾಶ್, ಡಾ.ಬಾಬು ಜಗಜೀವನರಾಂ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎನ್.ಆರ್. ಚಂದ್ರಶೇಖರ್, ಮುಖಂಡರುಗಳಾದ ಗುರು ಪ್ರಸಾದ್, ವೆಂಕಟಗಿರಿಯಯ್ಯ, ಮಹೇಶ್ ಕೃಷ್ಣ, ಎನ್.ಬಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago