ಮಂಡ್ಯ

ಜಿಲ್ಲೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ : ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ. ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ‌ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದರು.

ಅವರು ಶನಿವಾರ ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅನುದಾನ ಸಮರ್ಪಕ ಬಳಕೆಯಾಗಬೇಕು ಇಲಾಖೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಹಣ ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಅಧಿಕಾರಿಗಳು ಬಳಕೆ ಮಾಡಬೇಕು. ಅನುದಾನ ಬಿಡುಗಡೆಯಾಗಿ ಬಳಕೆಯಾಗದಿರುವ ಪ್ರಕರಣಗಳನ್ನು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ನೋಡಿದ್ದೇನೆ. ಸಮರ್ಪಕ ಅನುದಾನದ ಬಳಕೆ ಕೂಡ ಜಿಲ್ಲೆಯ ಅಭಿವೃದ್ಧಿಯ ಸಂಕೇತ ಎಂದರು.

ಸಾರ್ವಜನಿಕರಿಗೆ ಸ್ಪಂದಿಸಿ‌ ಅಭಿವೃದ್ಧಿಗೆ ಸಹಕರಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರ ಸಂಖ್ಯೆ ಹೆಚ್ಚು, ಅವರ ಕಷ್ಟಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿ. ಜಿಲ್ಲೆಯಲ್ಲಿ ಹಲವಾರು ಸಂಪನ್ಮೂಲಗಳಿವೆ ಆದರೂ ಬೇರೆ ಜಿಲ್ಲೆಗೆ ಹೋಲಿಸಿದರೆ ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯಬೇಕಿದೆ. ಯಾವುದೇ ಒತ್ತಡಗಳಿಗೆ ಮಣಿಯಬೇಡಿ ಕಾನೂನುಬದ್ಧವಾಗಿ ಕೆಲಸನಿರ್ವಹಿಸಿ ಎಂದು ಸೂಚಿಸಿದರು.

ಸಿ.ಎಸ್.ಆರ್ ಅನುದಾನದ ಮೂಲಕ ಅಧಿಕಾರಿಗಳು ಚುರುಕಾಗಿ ಹೊಸ ಯೋಚನೆಗಳನ್ನು ಜಾರಿಗೆ ತನ್ನಿ, ಮಾದರಿ ಶಾಲೆ, ಕಾಲೇಜು, ಆಸ್ಪತ್ರೆ, ಕ್ರೀಡಾಂಗಣ ನಿರ್ಮಾಣ ಕುರಿತು ಯೋಜನೆ ಸಿದ್ಧ ಪಡಿಸಿ, ಕೇಂದ್ರ ಸರ್ಕಾರ ಅಥವಾ ಸಿ.ಎಸ್.ಆರ್ ಅನುದಾನದ ಮೂಲಕ  ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸೋಣ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿ ನನ್ನ ಗುರಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳು, ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಇರುವ ನೀರಿನ ಮಟ್ಟ, ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಅನುಸರಿಸುವ ಕ್ರಮ, ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಮಾಹಿತಿಯನ್ನು ಸಚಿವರಿಗೆ ನೀಡಿದರು.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಯೋಜನೆಗಳನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಇದಲ್ಲದೇ ಮನ್ ಮುಲ್ ನಿಂದ ನ್ಯಾಷನಲ್ ಪ್ರೊಗ್ರಾಮ್‌ ಫಾರ್ ಡೈರಿ ಡೆವಲಪ್ಮೆಂಟ್ ಯೋಜನೆಯಡಿ ಮೂರು ಯೋಜನೆಗಳನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮನರೇಗಾ, ಸ್ವಚ್ಛ ಭಾರತ್ ಮಿಷನ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಪ್ರಧಾನಮಂತ್ರಿ ಆವಸ್ ಯೋಜನೆಯಲ್ಲಿ ಜಿಲ್ಲೆಯ ಪ್ರಗತಿಯ ಬಗ್ಗೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಈ ಬಾರಿ ಪ್ರಧಾನ ಮಂತ್ರಿ ಆವಸ್ ಯೋಜನೆಯಡಿ ಹೆಚ್ಚಿನ ಗುರಿ ನಿಗಧಿಯಾಗಲಿದೆ. ಇದಕ್ಕೆ ಇಂದಿನಿಂದಲೇ ಸಿದ್ಧತೆ ಪ್ರಾರಂಭಿಸಿ ಎಂದರು.

ಸಭೆಯಲ್ಲಿ ಕೆ.ಆರ್.ಪೇಟೆ ಶಾಸಕರಾದ ಹೆಚ್.ಟಿ ಮಂಜು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಸಂಜೀವಪ್ಪ, ನಿವೃತ್ತ ಐ.ಎ.ಎಸ್ ಅಧಿಕಾರಿ ಕೃಷ್ಣಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

1 hour ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

2 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

2 hours ago