ಮಂಡ್ಯ

ಲೋಕ್ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ : ನ್ಯಾಯಾಧೀಶ ಆನಂದ್

ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ಹೇಳಿದರು.

ಇಂದು (ಜು.05) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 12 ರಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸದರಿ ವರ್ಷದಲ್ಲಿ ನಡೆಯುತ್ತಿರುವ 2 ಲೋಕ್ ಅದಾಲತ್ ಇದಾಗಿದ್ದು, ಬಾಕಿ ಇರುವ ಸಿವಿಲ್ ಪ್ರಕರಣಗಳು, ವಿಭಾಗದ ದಾವೆಗಳು, ಹಣಕಾಸು ವಸೂಲಾತಿ ದಾವೆಗಳು, ಮೋಟಾರು ವಾಹನಗಳ ಪ್ರಕರಣಗಳು, ಎಂ.ಎಂ. ಆರ್. ಡಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ತೆಗೆದುಕೊಂಡು ಇತ್ಯಾರ್ಥ ಮಾಡಲಾಗುವುದು ಎಂದರು.

ತಾಲ್ಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ತಾಲೂಕಿನ ಎಲ್ಲಾ ನ್ಯಾಯಾಲಯಗಳಲ್ಲಿ ವ್ಯಾಜ್ಯಪೂರ್ವ ಪ್ರಕಾರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಕಾನೂನು ಬದ್ಧವಾಗಿ ಇತ್ಯರ್ಥಪಡಿಸಿಕೊಳ್ಳಿ ಎಂದು ಕರೆ ನೀಡಿದರು.

90 ದಿನಗಳ ಮಧ್ಯಸ್ಥಿಕೆ ಅಭಿಯಾನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ಭಾರಿ 90 ದಿನಗಳ ಮಧ್ಯಸ್ಥಿಕೆ ಆಂದೋಲನವನ್ನು ಜುಲೈ 1 ರಿಂದ ಅಕ್ಟೋಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ,

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ವಹಿಸುವ ಮೂಲಕ ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ, “ನೇಷನ್ 90 ಡೆಸ್” ಎಂಬ ಘೋಷವಾಕ್ಯದಡಿಯಲ್ಲಿ 7 ತಾಲ್ಲೂಕಿನಲ್ಲೂ ಮಧ್ಯಸ್ಥಿಕೆ ವಹಿಸಿ ಕಾನೂನು ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಮಧ್ಯಸ್ಥಿಕೆ ಡ್ರೈವ್ ನಲ್ಲಿ ನೂರಿತ ವಾಕೀಲರು ಹಾಗೂ ಕಕ್ಷಿದಾರರು ಇರುತ್ತಾರೆ ಇಬ್ಬರಿಗೂ ಸಹ ಸಮಾಧಾನ ತರುವ ರೀತಿಯಲ್ಲಿ ಹಾಗೂ ನ್ಯಾಯ ಸಮ್ಮತವಾಗಿ ಪ್ರಕರಣಗಳು ವಿಲೇವಾರಿ ಮಾಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

7 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

8 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

12 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

13 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

14 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

15 hours ago