ಮಂಡ್ಯ

ಲೋಕ್ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ : ನ್ಯಾಯಾಧೀಶ ಆನಂದ್

ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ಹೇಳಿದರು.

ಇಂದು (ಜು.05) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 12 ರಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸದರಿ ವರ್ಷದಲ್ಲಿ ನಡೆಯುತ್ತಿರುವ 2 ಲೋಕ್ ಅದಾಲತ್ ಇದಾಗಿದ್ದು, ಬಾಕಿ ಇರುವ ಸಿವಿಲ್ ಪ್ರಕರಣಗಳು, ವಿಭಾಗದ ದಾವೆಗಳು, ಹಣಕಾಸು ವಸೂಲಾತಿ ದಾವೆಗಳು, ಮೋಟಾರು ವಾಹನಗಳ ಪ್ರಕರಣಗಳು, ಎಂ.ಎಂ. ಆರ್. ಡಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ತೆಗೆದುಕೊಂಡು ಇತ್ಯಾರ್ಥ ಮಾಡಲಾಗುವುದು ಎಂದರು.

ತಾಲ್ಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ತಾಲೂಕಿನ ಎಲ್ಲಾ ನ್ಯಾಯಾಲಯಗಳಲ್ಲಿ ವ್ಯಾಜ್ಯಪೂರ್ವ ಪ್ರಕಾರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಕಾನೂನು ಬದ್ಧವಾಗಿ ಇತ್ಯರ್ಥಪಡಿಸಿಕೊಳ್ಳಿ ಎಂದು ಕರೆ ನೀಡಿದರು.

90 ದಿನಗಳ ಮಧ್ಯಸ್ಥಿಕೆ ಅಭಿಯಾನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ಭಾರಿ 90 ದಿನಗಳ ಮಧ್ಯಸ್ಥಿಕೆ ಆಂದೋಲನವನ್ನು ಜುಲೈ 1 ರಿಂದ ಅಕ್ಟೋಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ,

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ವಹಿಸುವ ಮೂಲಕ ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ, “ನೇಷನ್ 90 ಡೆಸ್” ಎಂಬ ಘೋಷವಾಕ್ಯದಡಿಯಲ್ಲಿ 7 ತಾಲ್ಲೂಕಿನಲ್ಲೂ ಮಧ್ಯಸ್ಥಿಕೆ ವಹಿಸಿ ಕಾನೂನು ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಮಧ್ಯಸ್ಥಿಕೆ ಡ್ರೈವ್ ನಲ್ಲಿ ನೂರಿತ ವಾಕೀಲರು ಹಾಗೂ ಕಕ್ಷಿದಾರರು ಇರುತ್ತಾರೆ ಇಬ್ಬರಿಗೂ ಸಹ ಸಮಾಧಾನ ತರುವ ರೀತಿಯಲ್ಲಿ ಹಾಗೂ ನ್ಯಾಯ ಸಮ್ಮತವಾಗಿ ಪ್ರಕರಣಗಳು ವಿಲೇವಾರಿ ಮಾಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

14 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

15 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

15 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

15 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

16 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 day ago