ಮದ್ದೂರು: ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸರ್ಕಾರವು ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಮ್.ಉದಯ್ ಹೇಳಿದರು.
ಅವರು ಇಂದು(ಜು.1) ಮದ್ದೂರು ತಾಲೂಕಿನ ಭಾರತೀನಗರ ಬಾಲಾಜಿ ಸಮುದಾಯ ಭವನದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಂದಾಗಿ ನೂರಾರು ಸಂಖ್ಯೆಯಲ್ಲಿ ಅರ್ಜಿಗಳನ್ನು ಹಿಡಿದು ನಾಡ ಕಛೇರಿ ಹಾಗೂ ತಾಲ್ಲೂಕು ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ಇದರ ಉಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ರೈತರಿಗೆ ಪಶು ಸಂಗೋಪನೆ, ತೋಟಗಾರಿಕೆ, ಕೃಷಿ, ರೇಷ್ಮೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸುತ್ತದೆ. ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಸೌಲಭ್ಯವನ್ನು ಪಾರದರ್ಶಕವಾಗಿ ಒದಗಿಸಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಹಾಗೂ ರೈತರಿಗೆ ಕೃಷಿ ಇಲಾಖೆ ವತಿಯಿಂದ ಸವಲತ್ತು ಹಾಗೂ ಕರಪತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಲ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…