ಮಂಡ್ಯ

ಸಾವರ್ಜನಿಕರು ಜನ ಸ್ಪಂದನ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಿ: ಕೆ.ಎಂ.ಉದಯ್

ಮದ್ದೂರು: ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸರ್ಕಾರವು ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಮ್.ಉದಯ್ ಹೇಳಿದರು.

ಅವರು ಇಂದು(ಜು.1) ಮದ್ದೂರು ತಾಲೂಕಿನ ಭಾರತೀನಗರ ಬಾಲಾಜಿ ಸಮುದಾಯ ಭವನದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಂದಾಗಿ ನೂರಾರು ಸಂಖ್ಯೆಯಲ್ಲಿ ಅರ್ಜಿಗಳನ್ನು ಹಿಡಿದು ನಾಡ ಕಛೇರಿ ಹಾಗೂ ತಾಲ್ಲೂಕು ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ಇದರ ಉಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ರೈತರಿಗೆ ಪಶು ಸಂಗೋಪನೆ, ತೋಟಗಾರಿಕೆ, ಕೃಷಿ, ರೇಷ್ಮೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸುತ್ತದೆ. ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಸೌಲಭ್ಯವನ್ನು ಪಾರದರ್ಶಕವಾಗಿ ಒದಗಿಸಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಹಾಗೂ ರೈತರಿಗೆ ಕೃಷಿ ಇಲಾಖೆ ವತಿಯಿಂದ ಸವಲತ್ತು ಹಾಗೂ ಕರಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಲ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago