Make Gram Panchayat offices women- and child-friendly: Suggestion by ZP CEO
ಮಂಡ್ಯ : ಗ್ರಾಮ ಪಂಚಾಯತ್ ಯೋಜನೆ ಹಾಗೂ ಕಾರ್ಯಕ್ರಮಗಳು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿರಬೇಕು, ಗ್ರಾ.ಪಂ. ಆಡಳಿತದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಕೊಳ್ಳಬೇಕು, ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಜಿ.ಪಂ. ಸಿಇಓ ನಂದಿನಿ ಅವರು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಶುಕ್ರವಾರ ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯತ್ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು ಇ-ಹಾಜರಾತಿ, ಇ-ಸ್ವತ್ತು ವಿತರಣೆ, ಸಕಾಲ, ನರೇಗಾ ಯೋಜನೆಯ ಕಡತಗಳ ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಗ್ರಾ.ಪಂ. ಗ್ರಂಥಾಲಯದ ಪೀಠೋಪಕರಣಗಳ ಪರಿಶೀಲನೆ ಇತ್ತೀಚೆಗೆ ಜಿಲ್ಲೆಯ 257 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಸರ್ಕಾರದ ನಿರ್ದೇಶನದಂತೆ ಪೀಠೋಪಕರಣಗಳನ್ನು ವಿತರಿಸಲಾಗಿದ್ದು, ಕಿರಂಗೂರು ಗ್ರಾಮ ಪಂಚಾಯತ್ ನ ಗ್ರಂಥಾಲಯದಲ್ಲಿ ಅವುಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಗ್ರಂಥಾಲಯದಲ್ಲಿ ಪುಸ್ತಕಗಳ ಸಂಗ್ರಹ ಹಾಗೂ ಲಭ್ಯವಿರುವ ಕಂಪ್ಯೂಟರ್ ಗಳ ಬಗ್ಗೆ ಮಾಹಿತಿ ಪಡೆದರು.
ಗ್ರಾ.ಪಂ. ಅಬಿಲೇಖಾಲಯಕ್ಕೆ ಮೆಚ್ಚುಗೆ
ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾ.ಪಂ. ಕಚೇರಿಯಲ್ಲಿ ಹಾಲಿ ಇರುವ ವ್ಯವಸ್ಥೆಯಲ್ಲಿಯೇ ಕಡತಗಳನ್ನು ವರ್ಗೀಕರಿಸಿ ಸಂಗ್ರಹಿಸಲು ತೆರೆಯಲಾಗಿರುವ ಅಬಿಲೇಖಾಲಯವನ್ನು ಪರಿಶೀಲಿಸಿದ ಸಿಇಓ ಅವರು ಪಿಡಿಓ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾ.ಪಂ. ಇಓ ಎ.ಬಿ. ವೇಣು, ಕಿರಂಗೂರು ಗ್ರಾ.ಪಂ. ಅಧ್ಯಕ್ಷೆ ರೂಪ ಆರ್, ಚಂದಗಾಲು ಗ್ರಾಮ ಪಂಚಾಯತ್ ನ ಪಿಡಿಓ ವಿದ್ಯಾ, ಕಿರಂಗೂರು ಗ್ರಾಮ ಪಂಚಾಯತ್ ನ ಪಿಡಿಓ ಪ್ರಶಾಂತ್ ಬಾಬು ಸೇರಿದಂತೆ ಇತರರು ಹಾಜರಿದ್ದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…