ಮಂಡ್ಯ

ಗ್ರಾ.ಪಂ ಕಚೇರಿಗಳನ್ನು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿಸಿ : ಜಿ.ಪಂ. ಸಿಇಓ ಸಲಹೆ

ಮಂಡ್ಯ : ಗ್ರಾಮ ಪಂಚಾಯತ್ ಯೋಜನೆ ಹಾಗೂ ಕಾರ್ಯಕ್ರಮಗಳು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿರಬೇಕು, ಗ್ರಾ.ಪಂ. ಆಡಳಿತದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಕೊಳ್ಳಬೇಕು, ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಜಿ.ಪಂ. ಸಿಇಓ ನಂದಿನಿ ಅವರು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ಶುಕ್ರವಾರ ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯತ್ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು ಇ-ಹಾಜರಾತಿ, ಇ-ಸ್ವತ್ತು ವಿತರಣೆ, ಸಕಾಲ, ನರೇಗಾ ಯೋಜನೆಯ ಕಡತಗಳ ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಗ್ರಾ.ಪಂ. ಗ್ರಂಥಾಲಯದ ಪೀಠೋಪಕರಣಗಳ ಪರಿಶೀಲನೆ ಇತ್ತೀಚೆಗೆ ಜಿಲ್ಲೆಯ 257 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಸರ್ಕಾರದ ನಿರ್ದೇಶನದಂತೆ ಪೀಠೋಪಕರಣಗಳನ್ನು ವಿತರಿಸಲಾಗಿದ್ದು, ಕಿರಂಗೂರು ಗ್ರಾಮ ಪಂಚಾಯತ್ ನ ಗ್ರಂಥಾಲಯದಲ್ಲಿ ಅವುಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಗ್ರಂಥಾಲಯದಲ್ಲಿ ಪುಸ್ತಕಗಳ ಸಂಗ್ರಹ ಹಾಗೂ ಲಭ್ಯವಿರುವ ಕಂಪ್ಯೂಟರ್ ಗಳ ಬಗ್ಗೆ ಮಾಹಿತಿ ಪಡೆದರು.

ಗ್ರಾ.ಪಂ. ಅಬಿಲೇಖಾಲಯಕ್ಕೆ ಮೆಚ್ಚುಗೆ
ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾ.ಪಂ. ಕಚೇರಿಯಲ್ಲಿ ಹಾಲಿ ಇರುವ ವ್ಯವಸ್ಥೆಯಲ್ಲಿಯೇ ಕಡತಗಳನ್ನು ವರ್ಗೀಕರಿಸಿ ಸಂಗ್ರಹಿಸಲು ತೆರೆಯಲಾಗಿರುವ ಅಬಿಲೇಖಾಲಯವನ್ನು ಪರಿಶೀಲಿಸಿದ ಸಿಇಓ ಅವರು ಪಿಡಿಓ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾ.ಪಂ. ಇಓ ಎ.ಬಿ. ವೇಣು, ಕಿರಂಗೂರು ಗ್ರಾ.ಪಂ. ಅಧ್ಯಕ್ಷೆ ರೂಪ ಆರ್, ಚಂದಗಾಲು ಗ್ರಾಮ ಪಂಚಾಯತ್ ನ ಪಿಡಿಓ ವಿದ್ಯಾ, ಕಿರಂಗೂರು ಗ್ರಾಮ ಪಂಚಾಯತ್ ನ ಪಿಡಿಓ ಪ್ರಶಾಂತ್ ಬಾಬು ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

53 mins ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

56 mins ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

1 hour ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

1 hour ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

1 hour ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

2 hours ago