ಮಂಡ್ಯ

ಗ್ರಾ.ಪಂ ಕಚೇರಿಗಳನ್ನು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿಸಿ : ಜಿ.ಪಂ. ಸಿಇಓ ಸಲಹೆ

ಮಂಡ್ಯ : ಗ್ರಾಮ ಪಂಚಾಯತ್ ಯೋಜನೆ ಹಾಗೂ ಕಾರ್ಯಕ್ರಮಗಳು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿರಬೇಕು, ಗ್ರಾ.ಪಂ. ಆಡಳಿತದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಕೊಳ್ಳಬೇಕು, ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಜಿ.ಪಂ. ಸಿಇಓ ನಂದಿನಿ ಅವರು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ಶುಕ್ರವಾರ ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯತ್ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು ಇ-ಹಾಜರಾತಿ, ಇ-ಸ್ವತ್ತು ವಿತರಣೆ, ಸಕಾಲ, ನರೇಗಾ ಯೋಜನೆಯ ಕಡತಗಳ ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಗ್ರಾ.ಪಂ. ಗ್ರಂಥಾಲಯದ ಪೀಠೋಪಕರಣಗಳ ಪರಿಶೀಲನೆ ಇತ್ತೀಚೆಗೆ ಜಿಲ್ಲೆಯ 257 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಸರ್ಕಾರದ ನಿರ್ದೇಶನದಂತೆ ಪೀಠೋಪಕರಣಗಳನ್ನು ವಿತರಿಸಲಾಗಿದ್ದು, ಕಿರಂಗೂರು ಗ್ರಾಮ ಪಂಚಾಯತ್ ನ ಗ್ರಂಥಾಲಯದಲ್ಲಿ ಅವುಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಗ್ರಂಥಾಲಯದಲ್ಲಿ ಪುಸ್ತಕಗಳ ಸಂಗ್ರಹ ಹಾಗೂ ಲಭ್ಯವಿರುವ ಕಂಪ್ಯೂಟರ್ ಗಳ ಬಗ್ಗೆ ಮಾಹಿತಿ ಪಡೆದರು.

ಗ್ರಾ.ಪಂ. ಅಬಿಲೇಖಾಲಯಕ್ಕೆ ಮೆಚ್ಚುಗೆ
ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾ.ಪಂ. ಕಚೇರಿಯಲ್ಲಿ ಹಾಲಿ ಇರುವ ವ್ಯವಸ್ಥೆಯಲ್ಲಿಯೇ ಕಡತಗಳನ್ನು ವರ್ಗೀಕರಿಸಿ ಸಂಗ್ರಹಿಸಲು ತೆರೆಯಲಾಗಿರುವ ಅಬಿಲೇಖಾಲಯವನ್ನು ಪರಿಶೀಲಿಸಿದ ಸಿಇಓ ಅವರು ಪಿಡಿಓ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾ.ಪಂ. ಇಓ ಎ.ಬಿ. ವೇಣು, ಕಿರಂಗೂರು ಗ್ರಾ.ಪಂ. ಅಧ್ಯಕ್ಷೆ ರೂಪ ಆರ್, ಚಂದಗಾಲು ಗ್ರಾಮ ಪಂಚಾಯತ್ ನ ಪಿಡಿಓ ವಿದ್ಯಾ, ಕಿರಂಗೂರು ಗ್ರಾಮ ಪಂಚಾಯತ್ ನ ಪಿಡಿಓ ಪ್ರಶಾಂತ್ ಬಾಬು ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

43 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

9 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

12 hours ago