ಮಂಡ್ಯ

ಪ್ರಬುದ್ದ ಸಾಹಿಗಳನ್ನೇ ಸಮ್ಮೇಳನಾಧ್ಯಕ್ಷರಾಗಿ ಮಾಡಿ: ಮಂಡ್ಯ ರಮೇಶ್‌ ಒತ್ತಾಯ

ಮಂಡ್ಯ: ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದರೆ ಅದು ಇಡೀ ಪ್ರಪಂಚಕ್ಕೆ ಮಾಡುವ ಮೋಸ, ಕಡ್ಡಾಯವಾಗಿ ಸಾಹಿತಿಗಳನ್ನೇ ಅದರಲ್ಲೂ ಪ್ರಬುದ್ಧರನ್ನ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಚಲನಚಿತ್ರ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಆಗುತ್ತಿರುವ ದಿಸೆಯಿಂದ ಸಾಹಿತಿಗಳೇ ಸಮ್ಮೇಳನಾಧ್ಯಕ್ಷರಾಗಬೇಕೆಂಬುದು ನನ್ನ ಕಡಾಖಂಡಿತ ವಾದವಾಗಿದ್ದು ತುಂಬಾ ಪ್ರಬುದ್ಧ, ಚಿಂತನೆಯುಳ್ಳ ಯೋಗ್ಯರನ್ನೇ ಆಯ್ಕೆ ಮಾಡಬೇಕು, ಮಂಡ್ಯದಲಿ ಈ ಹಿಂದೆ ನಡೆದ ಎರಡೂ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಜಯದೇವ ನಿಗಾಡೆ ಹಾಗೂ ಚದುರಂಗರಂತಹ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದ್ದು, ಅದೇ ರೀತಿ ಅದ್ಬುತ ಆಯ್ಕೆಯನ್ನು ಮಾಡಬೇಕಿದೆ ಸಾಹಿತಿಗಳಲ್ಲದೆ ರಾಜಕಾರಣಿಗಳು, ಮಠಾಧೀಶರು ಮತ್ಯಾರನ್ನಾದರು ಆಯ್ಕೆ ಮಾಡಿದರೆ ಅದು ಕನ್ನಡ ಜನಕ್ಕೆ ಮಾಡುವ ದೊಡ್ಡ ಮೋಸ ಎಂದು ಮಾರ್ದನಿಸಿದರು.

ಸಮ್ಮೇಳನಾಧ್ಯಕ್ಷರಾಗಲು ಕನ್ನಡದಲ್ಲಿ ತುಂಬ ಒಳ್ಳೆಯ ವ್ಯಕ್ತಿಗಳ ಹೆಸರುಗಳಿದ್ದು, ಅದನ್ನು ಬಿಟ್ಟು ಬೇರೆ ಕ್ಷೇತ್ರದವರನ್ನು ಆರಿಸಿಕೊಳ್ಳುವುದು ವಿಕೃತಿ ಎಂದು ಬಣ್ಣಿಸಿದ ಅವರು, ಸಾಹಿತ್ಯ ಎಂಬುದು ಬದುಕಾಗಬೇಕು. ಬದುಕಿನಲ್ಲಿ ಸಾಹಿತ್ಯವಾಗಬೇಕು ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದಲ್ಲಿ ಓದಿ ಬಂದು ಕನ್ನಡವನ್ನು ಚನ್ನಾಗಿ ಅರಿತವರಿಗೆ ಜಾಗತಿಕವಾಗಿ ತಲುಪಲು ಬೇಕಾದ ಉದ್ಯೂಗ ನಿರ್ಮಾಣ ಆಗಬೇಕಿದೆ. ಕಡ್ಡಾಯವಾಗಿ ಎಲ್ಲಾ ಕನ್ನಡ ಶಾಲೆಗಳ ಕನ್ನಡ ಕಲಿಸುವ ಶಿಕ್ಷಕರಿಗೆ ರಂಗ ಭೂಮಿಯ ಪರಿಚಯ ಮಾಡಿಸಿ ತರಬೇತಿ ನೀಡಬೇಕು. ಈ ಮೂಲಕ ಕನ್ನಡ ಶಿಕ್ಷಕರ ಸಂವಹನ ಗುಣ ಹೆಚ್ಚು ಮಾಡುವಂತ ಶಿಕ್ಷಣವನ್ನು ಸರ್ಕಾರ ಒದಗಿಸಬೇಕು. ಕನ್ನಡವನ್ನು ಉಳಿಸಿಕೊಳ್ಳಲು ತಾಲೂಕು ಕೇಂದ್ರಗಳಲ್ಲಿ ರಂಗಮಂದಿರ ಸೃಷ್ಠಿಸಿ, ಅಲ್ಲಿ ಗ್ರಂಥಾಲಯ ರಚಿಸಿ ಎಲ್ಲಾ ರೀತಿಯ ಪುಸ್ತಕ ಒದಗಿಸಬೇಕು ಎಂದು ಸಲಹೆ ನೀಡಿದರು.

ಒಂದು ಜಾಹೀರಾತಿಗೂ ಉತ್ತಮವಾದ ಸಾಹಿತ್ಯವಿಲ್ಲದೇ ಇದ್ದರೆ, ಅದು ಗಮನ ಸೆಳೆಯದು, ಕಾವ್ಯಾತ್ಮಕ ಗುಣ ಸಾಹಿತ್ಯದಲ್ಲಿ ಇರಬೇಕು. ಮಂಡ್ಯದಲ್ಲಿ ಕಾವ್ಯಾತ್ಮಕ ಸಾಹಿತ್ಯ ರಚಿಸುವ ಧೀಮಂತ ಸಾಹಿತಿಗಳಿದ್ದು, ಅವರಲ್ಲಿ ಬೆಸಗರಹಳ್ಳಿ ರಾಮಣ್ಣ, ಹೆಚ್.ಎಲ್.ಕೇಶವಮೂರ್ತಿ ಸೇರಿದಂತೆ ಹಲವರಿದ್ದಾರೆ. ಚಲನಚಿತ್ರದಲ್ಲೂ ಮಂಡ್ಯದವರ ಸಾಹಿತ್ಯದ ಪ್ರಭಾವ ಹೆಚ್ಚಿದೆ. ಪುಟ್ಟಣ್ಣ ಕಣಗಲ್ ಅವರ ಅದ್ಬುತ ಚಲನಚಿತ್ರಗಳಿಗೆ ಬೆನ್ನೆಲುಬಾಗಿ ಮಂಡ್ಯದ ಯೋಗಾನಂದ ಶಾಸ್ತ್ರಿಗಳ ಸಾಹಿತ್ಯ ಶಕ್ತಿ ತುಂಬಿದ್ದವು ಎಂದು ನೆನೆದರು.

ಸಾಹಿತ್ಯ ಸಮ್ಮೇಳನಗಳು ಮಕ್ಕಳನ್ನು ಕನ್ನಡ ಓದಲು ಪ್ರೇರೇಪಿಸುವಂತಹ ಕೆಲಸ ಮಾಡಬೇಕು. ಸಮ್ಮೇಳನ ಸಾಹಿತಿಗಳನ್ನು ಮಾತ್ರವಲ್ಲ ಅಲ್ಲಿನ ಕಲೆಯನ್ನು ವೀಕ್ಷಿಸಲು ಬರುವ ಶಾಲಾ ಕಾಲೇಜಿನ ಯುವತಲೆಮಾರಿನ ಕೈಯಲ್ಲಿ ಪುಸ್ತಕವಿದ್ದರೆ ಪುಸ್ತಕ ಪ್ರೀತಿ ಹೆಚ್ಚುತ್ತದೆ. ಈ ಮೂಲಕ ಮಕ್ಕಳಿಗೆ ಸಾಹಿತ್ಯ ಜ್ಞಾನದ ಮೂಲಕ ಜಗತ್ತಿನ ಮನಸ್ಸು ವಿಸ್ತರಿಸುವ ಕೆಲಸವಾಗಿ, ಪರಂಪರೆಯನ್ನು ದಾಖಲಿಸುವ ಕೆಲಸವಾಗಬೇಕು ಎಂದು ಪ್ರಶ್ನೆಗೆ ಉತ್ತರಿಸಿದರು.

ಸಿನಿಮಾ ಮತ್ತು ರಂಗಭೂಮಿಗಳು ಭೂಮಿಯಷ್ಟೇ ಆತಂಕದ ಸ್ಥಿತಿಯಲ್ಲಿದೆ. ಕನ್ನಡ ಸಾಹಿತ್ಯದ ಹಿನ್ನಲೆಯಲ್ಲಿ ಬಂದಂತ ಸಿನಿಮಾಗಳನ್ನು ಗುರುತಿಸುವ ಕೆಲಸವನ್ನು ಸಾಹಿತ್ಯ ಸಮ್ಮೇಳನದಲ್ಲಿ ನಡೆಯಬೇಕಿದೆ. ಒಳ್ಳೆಯದನ್ನು ಗಮನಿಸುವಲ್ಲಿ ನಾವು ಸೋಲುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಮ್ಮೇಳನಗಳು ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಪ್ರತಿ ಜಿಲ್ಲೆಯಲ್ಲೂ ರಂಗಾಯಣವಾಗಬೇಕು. ಸಾಹಿತ್ಯ ಭವನಗಳಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಕಾವ್ಯ ವಾಚನ, ಸಂಗೀತ ಓದಿಸುವ ಕೆಲಸ ಆಗಬೇಕಿದೆ. ಕಾದಂಬರಿ, ಸಾಹಿತ್ಯಗಳನ್ನು ನಾಟಕ, ಸಿನಿಮಾ ಆಗಿ ಪರಿವರ್ತಿಸುವ ಸಿದ್ದತೆಗಳನ್ನು ಮಕ್ಕಳಿಗೆ ಕಲಿಸಬೇಕಿದೆ. ಇಂದಿನ ಯುವ ಜನತೆಯನ್ನು ಕೌಶಲ್ಯ ವೃದ್ಧಿಯಾಗುತ್ತಿದೆ. ಇದರ ಜೊತೆಗೆ ಸಾಹಿತ್ಯದ ಮನಸ್ಥಿತಿ ವೃದ್ಧಿಸುವ ಕೆಲಸ ಸಮ್ಮೇಳನದ ಗೋಷ್ಠಿಯಲ್ಲಿ ಆಗಬೇಕಿದೆ ಎಂದರು.

ಸಮ್ಮೇಳನದಲ್ಲಿ ಕಾರ್ಯಕ್ರಮ ನೀಡುವಂತೆ ಕರೆ ಬಂದರೆ ಒಂದು ದಿನ ಶಿಬಿರ ಆಯೋಜಿಸಿ, ರಂಗಭೂಮಿ ಸಾಹಿತ್ಯದ ಕುರಿತು ಮಾತನಾಡಿ, ಕೆಲಸ ಮಾಡಿ, ಸರ್ಕಾರವನ್ನೇ ಎದುರಿಸಿ ನಾಟಕ ಮಾಡುವಂತಹ ಕಾರ್ಯಕ್ರಮವನ್ನು ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ತಮ್ಮ ಉತ್ತರವನ್ನು ನೀಡಿದರು.

ನನಗೆ ಮಂಡ್ಯ ಜಿಲ್ಲೆಯಿಂದ ದೊರೆತ ಪ್ರೀತಿ ಮುಂದಿನ ಜನ್ಮದಲ್ಲೂ ತೀರಿಸಲಾಗದು, ಮಣ್ಣಿಗೆ ಆಪ್ತ ಭಾವ, ತಾಯ್ತನವಿದ್ದು ಅದನ್ನು ಕಾಪಾಡಿಕೊಳ್ಳಲು ಇಷ್ಟ ಪಡುತ್ತೇನೆ ಎಂದು ಮನವದಾಳದ ಮಾತುಗಳನ್ನಾಡಿದರು.

ಸಂವಾದದಲ್ಲಿ ಹಿರಿಯ ಪತ್ರಕರ್ತ, ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ರವಿ, ಪ್ರಧಾನ ಕಾರ್ಯದರ್ಶಿ ಆನಂದ್, ಖಜಾಂಚಿ ನಂಜುಂಡಸ್ವಾಮಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

2 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

3 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

3 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

4 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

4 hours ago