ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ ಹಾಕುತ್ತಿದ್ದರು ಎನ್ನಲಾಗಿದೆ. ಇದರಿಂದ ನವೀನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇದನ್ನೂ ಓದಿ:-ಆನೆ,ಚಿರತೆ,ಹುಲಿ ದಾಳಿ ಬಳಿಕ ಹಂದಿ ಕಾಟ : ಕಾಡು ಹಂದಿ ದಾಳಿಗೆ ರೈತ ಬಲಿ
ಮಳವಳ್ಳಿ ಪಟ್ಟಣದ ಪೊಲೀಸ್ ಠಾಣೆ ಎದುರಿನಲ್ಲಿರುವ ಜ್ಯೂಸ್ ಬರ್ಗ್ ಅಂಗಡಿಯಲ್ಲಿ ಗುರುವಾರ ಸಂಜೆ ಪೇದೆ ವೆಂಕಟೇಶ್ ಅವರು 5 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಡಿವೈಎಸ್ಪಿ ಸುನಿಲ್ ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.
ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿ ಹಾಜರಿದ್ದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…