ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ ಹಾಕುತ್ತಿದ್ದರು ಎನ್ನಲಾಗಿದೆ. ಇದರಿಂದ ನವೀನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇದನ್ನೂ ಓದಿ:-ಆನೆ,ಚಿರತೆ,ಹುಲಿ ದಾಳಿ ಬಳಿಕ ಹಂದಿ ಕಾಟ : ಕಾಡು ಹಂದಿ ದಾಳಿಗೆ ರೈತ ಬಲಿ
ಮಳವಳ್ಳಿ ಪಟ್ಟಣದ ಪೊಲೀಸ್ ಠಾಣೆ ಎದುರಿನಲ್ಲಿರುವ ಜ್ಯೂಸ್ ಬರ್ಗ್ ಅಂಗಡಿಯಲ್ಲಿ ಗುರುವಾರ ಸಂಜೆ ಪೇದೆ ವೆಂಕಟೇಶ್ ಅವರು 5 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಡಿವೈಎಸ್ಪಿ ಸುನಿಲ್ ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.
ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿ ಹಾಜರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…