ಮಂಡ್ಯ

ಮಳವಳ್ಳಿ | ಜಾತ್ರೆ ವೇಳೆ ಅವೈಜ್ಞಾನಿಕ ಆಚರಣೆ ರದ್ದತಿಗೆ ಒತ್ತಾಯ

ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ ಸೇರಿದಂತೆ ಹಲವರು ಗ್ರಾಮದಲ್ಲಿ ತಮ್ಮದೇ ಕಾನೂನು ಕಟ್ಟಳೆಗಳನ್ನು ನಿರ್ಮಿಸಿ ಒಂದೊಂದು ದಿನ ಒಂದೊಂದು ಉತ್ಸವ ಆಚರಿಸುತ್ತಿದ್ದಾರೆ ಎಂದರು.

ಗ್ರಾಮದೇವತೆಗೆ ಪ್ರಿಯವಾದುದೆಂದು ಹೇಳಿ ಹಬ್ಬ ಆಚರಿಸು ೭ ಗ್ರಾಮದ ಜನಸ್ತೋಮದ ಮೇಲೆ ಹೆಂಡ, ಗಾಂಜಾ ಸೇವನೆ ಮಾಡಿದ ಗೂಳಿಯನ್ನು ಬಿಡುವುದು, ಬಾಯಿ ಚುಚ್ಚಿಕೊಂಡು ೨ ಕಿ.ಮೀ ನಡೆದುಕೊಂಡು ಹೋಗುವುದು, ಮುಟ್ಟಾದ ಮಹಿಳೆಯರನ್ನು, ಸಾವಾದ ಮನೆಯ ಕುಟುಂಬದವರನ್ನು ಗ್ರಾಮದಿಂದ ಹೊರಗಿಡುವುದು, ಗ್ರಾಮದ ಅರ್ಚಕರಿಗೆ ೧೦ ಸಾವಿರ ಹಣ ನೀಡಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡುವುದು ಸೇರಿದಂತೆ ಹಲವು ಅಕ್ರಮಗಳು ದೈವದ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ದೈವದ ಹೆಸರಿನಲ್ಲಿ ಗ್ರಾಮದಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿಯುಂಟಾಗಿದ್ದು, ನೆಪ ಮಾತ್ರಕ್ಕೆ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ, ಚುನಾಯಿತ ಜನಪ್ರತಿನಿಧಿಗಳು ಕೂಡಲೇ ರದ್ದುಗೊಳಿಸುವ ಕ್ರಮ ವಹಿಸಿ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಗ್ರಾಮಸ್ಥರೆಲ್ಲರೂ ನೆಮ್ಮದಿಯಿಂದ ಜಾತ್ರಾಮಹೋತ್ಸವವನ್ನು ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

2 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

3 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

4 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

5 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

5 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

5 hours ago