ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ ಸೇರಿದಂತೆ ಹಲವರು ಗ್ರಾಮದಲ್ಲಿ ತಮ್ಮದೇ ಕಾನೂನು ಕಟ್ಟಳೆಗಳನ್ನು ನಿರ್ಮಿಸಿ ಒಂದೊಂದು ದಿನ ಒಂದೊಂದು ಉತ್ಸವ ಆಚರಿಸುತ್ತಿದ್ದಾರೆ ಎಂದರು.
ಗ್ರಾಮದೇವತೆಗೆ ಪ್ರಿಯವಾದುದೆಂದು ಹೇಳಿ ಹಬ್ಬ ಆಚರಿಸು ೭ ಗ್ರಾಮದ ಜನಸ್ತೋಮದ ಮೇಲೆ ಹೆಂಡ, ಗಾಂಜಾ ಸೇವನೆ ಮಾಡಿದ ಗೂಳಿಯನ್ನು ಬಿಡುವುದು, ಬಾಯಿ ಚುಚ್ಚಿಕೊಂಡು ೨ ಕಿ.ಮೀ ನಡೆದುಕೊಂಡು ಹೋಗುವುದು, ಮುಟ್ಟಾದ ಮಹಿಳೆಯರನ್ನು, ಸಾವಾದ ಮನೆಯ ಕುಟುಂಬದವರನ್ನು ಗ್ರಾಮದಿಂದ ಹೊರಗಿಡುವುದು, ಗ್ರಾಮದ ಅರ್ಚಕರಿಗೆ ೧೦ ಸಾವಿರ ಹಣ ನೀಡಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡುವುದು ಸೇರಿದಂತೆ ಹಲವು ಅಕ್ರಮಗಳು ದೈವದ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ದೈವದ ಹೆಸರಿನಲ್ಲಿ ಗ್ರಾಮದಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿಯುಂಟಾಗಿದ್ದು, ನೆಪ ಮಾತ್ರಕ್ಕೆ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ, ಚುನಾಯಿತ ಜನಪ್ರತಿನಿಧಿಗಳು ಕೂಡಲೇ ರದ್ದುಗೊಳಿಸುವ ಕ್ರಮ ವಹಿಸಿ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಗ್ರಾಮಸ್ಥರೆಲ್ಲರೂ ನೆಮ್ಮದಿಯಿಂದ ಜಾತ್ರಾಮಹೋತ್ಸವವನ್ನು ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.
ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್ ವಿರುದ್ಧ…
ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…