ಮಂಡ್ಯ

ಮಳವಳ್ಳಿ | ಜಾತ್ರೆ ವೇಳೆ ಅವೈಜ್ಞಾನಿಕ ಆಚರಣೆ ರದ್ದತಿಗೆ ಒತ್ತಾಯ

ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ ಸೇರಿದಂತೆ ಹಲವರು ಗ್ರಾಮದಲ್ಲಿ ತಮ್ಮದೇ ಕಾನೂನು ಕಟ್ಟಳೆಗಳನ್ನು ನಿರ್ಮಿಸಿ ಒಂದೊಂದು ದಿನ ಒಂದೊಂದು ಉತ್ಸವ ಆಚರಿಸುತ್ತಿದ್ದಾರೆ ಎಂದರು.

ಗ್ರಾಮದೇವತೆಗೆ ಪ್ರಿಯವಾದುದೆಂದು ಹೇಳಿ ಹಬ್ಬ ಆಚರಿಸು ೭ ಗ್ರಾಮದ ಜನಸ್ತೋಮದ ಮೇಲೆ ಹೆಂಡ, ಗಾಂಜಾ ಸೇವನೆ ಮಾಡಿದ ಗೂಳಿಯನ್ನು ಬಿಡುವುದು, ಬಾಯಿ ಚುಚ್ಚಿಕೊಂಡು ೨ ಕಿ.ಮೀ ನಡೆದುಕೊಂಡು ಹೋಗುವುದು, ಮುಟ್ಟಾದ ಮಹಿಳೆಯರನ್ನು, ಸಾವಾದ ಮನೆಯ ಕುಟುಂಬದವರನ್ನು ಗ್ರಾಮದಿಂದ ಹೊರಗಿಡುವುದು, ಗ್ರಾಮದ ಅರ್ಚಕರಿಗೆ ೧೦ ಸಾವಿರ ಹಣ ನೀಡಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡುವುದು ಸೇರಿದಂತೆ ಹಲವು ಅಕ್ರಮಗಳು ದೈವದ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ದೈವದ ಹೆಸರಿನಲ್ಲಿ ಗ್ರಾಮದಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿಯುಂಟಾಗಿದ್ದು, ನೆಪ ಮಾತ್ರಕ್ಕೆ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ, ಚುನಾಯಿತ ಜನಪ್ರತಿನಿಧಿಗಳು ಕೂಡಲೇ ರದ್ದುಗೊಳಿಸುವ ಕ್ರಮ ವಹಿಸಿ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಗ್ರಾಮಸ್ಥರೆಲ್ಲರೂ ನೆಮ್ಮದಿಯಿಂದ ಜಾತ್ರಾಮಹೋತ್ಸವವನ್ನು ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

14 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago