ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ ಸೇರಿದಂತೆ ಹಲವರು ಗ್ರಾಮದಲ್ಲಿ ತಮ್ಮದೇ ಕಾನೂನು ಕಟ್ಟಳೆಗಳನ್ನು ನಿರ್ಮಿಸಿ ಒಂದೊಂದು ದಿನ ಒಂದೊಂದು ಉತ್ಸವ ಆಚರಿಸುತ್ತಿದ್ದಾರೆ ಎಂದರು.
ಗ್ರಾಮದೇವತೆಗೆ ಪ್ರಿಯವಾದುದೆಂದು ಹೇಳಿ ಹಬ್ಬ ಆಚರಿಸು ೭ ಗ್ರಾಮದ ಜನಸ್ತೋಮದ ಮೇಲೆ ಹೆಂಡ, ಗಾಂಜಾ ಸೇವನೆ ಮಾಡಿದ ಗೂಳಿಯನ್ನು ಬಿಡುವುದು, ಬಾಯಿ ಚುಚ್ಚಿಕೊಂಡು ೨ ಕಿ.ಮೀ ನಡೆದುಕೊಂಡು ಹೋಗುವುದು, ಮುಟ್ಟಾದ ಮಹಿಳೆಯರನ್ನು, ಸಾವಾದ ಮನೆಯ ಕುಟುಂಬದವರನ್ನು ಗ್ರಾಮದಿಂದ ಹೊರಗಿಡುವುದು, ಗ್ರಾಮದ ಅರ್ಚಕರಿಗೆ ೧೦ ಸಾವಿರ ಹಣ ನೀಡಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡುವುದು ಸೇರಿದಂತೆ ಹಲವು ಅಕ್ರಮಗಳು ದೈವದ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ದೈವದ ಹೆಸರಿನಲ್ಲಿ ಗ್ರಾಮದಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿಯುಂಟಾಗಿದ್ದು, ನೆಪ ಮಾತ್ರಕ್ಕೆ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ, ಚುನಾಯಿತ ಜನಪ್ರತಿನಿಧಿಗಳು ಕೂಡಲೇ ರದ್ದುಗೊಳಿಸುವ ಕ್ರಮ ವಹಿಸಿ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಗ್ರಾಮಸ್ಥರೆಲ್ಲರೂ ನೆಮ್ಮದಿಯಿಂದ ಜಾತ್ರಾಮಹೋತ್ಸವವನ್ನು ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…