ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿರುವ ಘಟನೆ ವರದಿಯಾಗಿದೆ.
ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ
ಕನಕಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀಕ ಸ್ಥಳವಾದ ಮುತ್ತತ್ತಿ ಆಂಜನೆಯಸ್ವಾಮಿ ದೇವಸ್ಥಾನಕ್ಕೆ ಕಾರ್ತಿಕ ಮಾಸದ ಅಂಗವಾಗಿ ಮತ್ತು ಶನಿವಾರ ದೇವರ ದರ್ಶನ ಪಡೆುಂಲು ಸುಮಾರು ೪೦ಕ್ಕೂ ಹೆಚ್ಚು ಪ್ರಾಯಾಣಿಕರನ್ನು ಹೊತ್ತು ತೆರಳುತ್ತಿತ್ತು. ಕೆಸರಕ್ಕಿ ಹಳ್ಳದ ಕಡಿದಾದ ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಬಸ್ನ ಬ್ರೇಕ್ ವಿಫಲವಾಗಿ ಈ ವೇಳೆ ವಿಚಲಿತರಾಗದ ಚಾಲಕ ಪ್ರಾಯಣಿಕರಿಗೆ ಗಟ್ಟಿಯಾಗಿ ಹಿಡಿದುಕೊಳ್ಳುವಂತೆ ಧೈರ್ಯ ಹೇಳಿದ್ದಾರೆ. ಕೂಡಲೇ ಬಸ್ ನಿಯಂತ್ರಣ ಕಳೆದುಕೊಳ್ಳದಂತೆ ಚಾಲನೆ ಮಾಡುತ್ತಾ ರಸ್ತೆ ಬದಿಯಲ್ಲಿದ್ದ ಕಲ್ಲಿನ ಗುಡ್ಡೆಗೆ ಹತ್ತಿಸಿ ಬಸ್ ನಿಲ್ಲಿಸಿದ್ದಾರೆ.
ಗಾಯಗೊಂಡ ನಿರ್ವಾಹಕಿಯಾದ ಸೌಜನ್ಯರನ್ನು ಹಲಗೂರಿನ ಬಸ್ ನಿಲ್ದಾಣದ ಮೇಲ್ವಿಚಾರಕ ಸಿ.ಎಂ.ಗೌಡ ಹಲಗೂರು ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…