ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿರುವ ಘಟನೆ ವರದಿಯಾಗಿದೆ.
ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ
ಕನಕಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀಕ ಸ್ಥಳವಾದ ಮುತ್ತತ್ತಿ ಆಂಜನೆಯಸ್ವಾಮಿ ದೇವಸ್ಥಾನಕ್ಕೆ ಕಾರ್ತಿಕ ಮಾಸದ ಅಂಗವಾಗಿ ಮತ್ತು ಶನಿವಾರ ದೇವರ ದರ್ಶನ ಪಡೆುಂಲು ಸುಮಾರು ೪೦ಕ್ಕೂ ಹೆಚ್ಚು ಪ್ರಾಯಾಣಿಕರನ್ನು ಹೊತ್ತು ತೆರಳುತ್ತಿತ್ತು. ಕೆಸರಕ್ಕಿ ಹಳ್ಳದ ಕಡಿದಾದ ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಬಸ್ನ ಬ್ರೇಕ್ ವಿಫಲವಾಗಿ ಈ ವೇಳೆ ವಿಚಲಿತರಾಗದ ಚಾಲಕ ಪ್ರಾಯಣಿಕರಿಗೆ ಗಟ್ಟಿಯಾಗಿ ಹಿಡಿದುಕೊಳ್ಳುವಂತೆ ಧೈರ್ಯ ಹೇಳಿದ್ದಾರೆ. ಕೂಡಲೇ ಬಸ್ ನಿಯಂತ್ರಣ ಕಳೆದುಕೊಳ್ಳದಂತೆ ಚಾಲನೆ ಮಾಡುತ್ತಾ ರಸ್ತೆ ಬದಿಯಲ್ಲಿದ್ದ ಕಲ್ಲಿನ ಗುಡ್ಡೆಗೆ ಹತ್ತಿಸಿ ಬಸ್ ನಿಲ್ಲಿಸಿದ್ದಾರೆ.
ಗಾಯಗೊಂಡ ನಿರ್ವಾಹಕಿಯಾದ ಸೌಜನ್ಯರನ್ನು ಹಲಗೂರಿನ ಬಸ್ ನಿಲ್ದಾಣದ ಮೇಲ್ವಿಚಾರಕ ಸಿ.ಎಂ.ಗೌಡ ಹಲಗೂರು ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…