ಮಂಡ್ಯ

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ.

ಸೆಸ್ಕ್‌ನ ಮಾದರಿ ಗ್ರಾಮ ಯೋಜನೆಯಡಿ ಕಲ್ಕುಣಿ ಗ್ರಾಮದ ಬಳಿಯ ಚಿಕ್ಕಕಲ್ಕುಣಿ ರಸ್ತೆಯಲ್ಲಿ ಗುರುವಾರ ಸಂಜೆ ೬.೩೦ರ ಸಮಯದಲ್ಲಿ ಗುತ್ತಿಗೆದಾರರ ಮೂಲಕ ಹಳೇ ವಿದ್ಯುತ್ ವೈರ್‌ಗಳ ಬದಲಾವಣೆ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ :-2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ವಿದ್ಯುತ್ ಕಂಬವನ್ನೇರಿ ತಂತಿಯನ್ನು ಬದಲಾಯಿಸುವ ವೇಳೆ ವಿದ್ಯುತ್ ತಗುಲಿ ಕಂಬದಿಂದ ಕೆಳಗೆ ಬಿದ್ದು ಮೃತಪಟ್ಟನೆಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು ಇಲ್ಲದಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ಶವವನ್ನು ಮಳವಳ್ಳಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮೃತನ ವಾರಸುದಾರರು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

1 hour ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

1 hour ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

1 hour ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

2 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

4 hours ago