ಮಂಡ್ಯ

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ.

ಸೆಸ್ಕ್‌ನ ಮಾದರಿ ಗ್ರಾಮ ಯೋಜನೆಯಡಿ ಕಲ್ಕುಣಿ ಗ್ರಾಮದ ಬಳಿಯ ಚಿಕ್ಕಕಲ್ಕುಣಿ ರಸ್ತೆಯಲ್ಲಿ ಗುರುವಾರ ಸಂಜೆ ೬.೩೦ರ ಸಮಯದಲ್ಲಿ ಗುತ್ತಿಗೆದಾರರ ಮೂಲಕ ಹಳೇ ವಿದ್ಯುತ್ ವೈರ್‌ಗಳ ಬದಲಾವಣೆ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ :-2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ವಿದ್ಯುತ್ ಕಂಬವನ್ನೇರಿ ತಂತಿಯನ್ನು ಬದಲಾಯಿಸುವ ವೇಳೆ ವಿದ್ಯುತ್ ತಗುಲಿ ಕಂಬದಿಂದ ಕೆಳಗೆ ಬಿದ್ದು ಮೃತಪಟ್ಟನೆಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು ಇಲ್ಲದಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ಶವವನ್ನು ಮಳವಳ್ಳಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮೃತನ ವಾರಸುದಾರರು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago