Mysore
23
overcast clouds

Social Media

ಗುರುವಾರ, 11 ಜೂನ್ 2026
Light
Dark

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ.

ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಗ್ರಾಮದ ಟಿ.ಕೆ.ಮನು, ಟಿ.ಎಸ್.ಅಭಿಷೇಕ್ ಗೌಡ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಣ್ಣೇಸ್ವಾಮಿ ಎಂಬುವವರ ಮನೆಯ ಬಳಿ ಚಿರತೆ ರಸ್ತೆ ದಾಟುತ್ತಿದ್ದನ್ನು ಕಾರು ನಿಲ್ಲಿಸಿದ್ದಾರೆ.

ಬೃಹತ್ ಗಾತ್ರದ ಚಿರತೆ ಕಂಡ ಕಾರು ಚಾಲಕ ಟಿ.ಕೆ.ಮನು ಅವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇದೇ ರಸ್ತೆಯಲ್ಲಿ ಕಳೆದ ವಾರದ ಹಿಂದೆ ಸಹ ಚಿರತೆ ಕಾಣಿಸಿಕೊಂಡಿತ್ತು.

ಕಳೆದ ಹಲವಾರು ತಿಂಗಳಿಂದ ಗ್ರಾಮದ ಸುತ್ತಮುತ್ತ ಐದಾರು ಚಿರತೆಗಳು ಓಡಾಟ ನಡೆಸುತ್ತಿದ್ದು, 10ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಬಲಿ ಪಡೆದಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಗ್ರಾಮದ ಹನುಮಂತು ಆಗ್ರಹಿಸಿದ್ದಾರೆ.

Tags:
error: Content is protected !!