ಮಂಡ್ಯ

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು ಹೋಬಳಿ ಮಾಸ್ಟರ್ ದೊಡ್ಡಿಯ ಮಹೇಶ್ ಬಂಧಿತ ಆರೋಪಿಗಳು.

ಬೆಂಗಳೂರಿನ ಜೆ.ಪಿ‌.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾರ್ಚ್ 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಅವರ ತಂಡವು ತ್ವರಿತಗತಿಯಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಿಪಿಐ ಶ್ರೀಧರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

23 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago