ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು ಹೋಬಳಿ ಮಾಸ್ಟರ್ ದೊಡ್ಡಿಯ ಮಹೇಶ್ ಬಂಧಿತ ಆರೋಪಿಗಳು.
ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾರ್ಚ್ 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಅವರ ತಂಡವು ತ್ವರಿತಗತಿಯಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಿಪಿಐ ಶ್ರೀಧರ್ ತಿಳಿಸಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…