ಮಂಡ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 26 ವರ್ಷ ಶಿಕ್ಷೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ ಪಾಷಾ ಅವರ ಮಗ ಜಿ. ಸಲ್ಮಾನ್ ಪಾಷಾ (26) ಶಿಕ್ಷೆಗೊಳಗಾದ ಅಪರಾಧಿ.

ಆರೋಪಿ ಸಲ್ಮಾನ್ ಪಾಷ ಬಡಾವಣೆಯ ಬಾಲಕಿ ಶಾಲೆಗೆ ಮತ್ತು ಟ್ಯೂಷನ್‌ಗೆ ಹೋಗುವಾಗ ಮತ್ತು ಬರುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ತಿಂಡಿ ಕೊಟ್ಟು ಮಾತನಾಡಿಸುತ್ತಿದ್ದನು. ಆಕೆ ಪ್ರತಿದಿನ ಸಂಜೆ ಟ್ಯೂಷನ್‌ಗೆ ಹೋಗುವಾಗ ಆರೋಪಿಯು ಬಾಲಕಿಯನ್ನು ಯಾರೂ ಇಲ್ಲದ ಸಮಯದಲ್ಲಿ ತನ್ನ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

2022ನೇ ಜುಲೈ 3ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಬಾಲಕಿಯನ್ನು ರೂಂನ ಕಿಟಕಿಯ ಮೂಲಕ ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಗಿಫ್ಟ್ ಕೊಡುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಪ್ರಕರಣ ಕುರಿತಂತೆ ದೂರು ದಾಖಲಾದ ನಂತರ ಐಪಿಸಿ ಸೆಕ್ಷನ್‌ 354(ಡಿ), 366, 378(ಎಬಿ), 376 (2)(ಎನ್) ಐಪಿಸಿ & ಕಲಂ 6, 12 ಪೋಕ್ಸೋ ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಅಂದಿನ ಇನ್‌ಸ್ಪೆಕ್ಟರ್ ಎಸ್.ಕೆ. ಕೃಷ್ಣ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿಶೇಷ ಪ್ರಕರಣ ಕುರಿತಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಸಲ್ಮಾನ್ ಪಾಷನಿಗೆ ಐಪಿಸಿ ಕಲಂ 354(ಡಿ) ಮತ್ತು ಫೋಕ್ಸೋ ಕಾಯ್ದೆ ಕಲಂ 12 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 363 ಮತ್ತು 366 ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 447 ಅಡಿಯಲ್ಲಿನ ಅಪರಾಧಕ್ಕೆ 3 ತಿಂಗಳ ಕಠಿಣ ಶಿಕ್ಷೆ ಮತ್ತು 500 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 15 ದಿನಗಳ ಸಾದಾ ಶಿಕ್ಷೆ.

ಐಪಿಸಿ ಕಲಂ 376ಎಬಿ ಮತ್ತು ಫೋಕ್ಸೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ 21 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷ ಕಠಿಣ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು.

andolana

Recent Posts

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

24 seconds ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

10 mins ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

13 mins ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

23 mins ago

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

2 hours ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

3 hours ago