ಮಂಡ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 26 ವರ್ಷ ಶಿಕ್ಷೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ ಪಾಷಾ ಅವರ ಮಗ ಜಿ. ಸಲ್ಮಾನ್ ಪಾಷಾ (26) ಶಿಕ್ಷೆಗೊಳಗಾದ ಅಪರಾಧಿ.

ಆರೋಪಿ ಸಲ್ಮಾನ್ ಪಾಷ ಬಡಾವಣೆಯ ಬಾಲಕಿ ಶಾಲೆಗೆ ಮತ್ತು ಟ್ಯೂಷನ್‌ಗೆ ಹೋಗುವಾಗ ಮತ್ತು ಬರುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ತಿಂಡಿ ಕೊಟ್ಟು ಮಾತನಾಡಿಸುತ್ತಿದ್ದನು. ಆಕೆ ಪ್ರತಿದಿನ ಸಂಜೆ ಟ್ಯೂಷನ್‌ಗೆ ಹೋಗುವಾಗ ಆರೋಪಿಯು ಬಾಲಕಿಯನ್ನು ಯಾರೂ ಇಲ್ಲದ ಸಮಯದಲ್ಲಿ ತನ್ನ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

2022ನೇ ಜುಲೈ 3ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಬಾಲಕಿಯನ್ನು ರೂಂನ ಕಿಟಕಿಯ ಮೂಲಕ ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಗಿಫ್ಟ್ ಕೊಡುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಪ್ರಕರಣ ಕುರಿತಂತೆ ದೂರು ದಾಖಲಾದ ನಂತರ ಐಪಿಸಿ ಸೆಕ್ಷನ್‌ 354(ಡಿ), 366, 378(ಎಬಿ), 376 (2)(ಎನ್) ಐಪಿಸಿ & ಕಲಂ 6, 12 ಪೋಕ್ಸೋ ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಅಂದಿನ ಇನ್‌ಸ್ಪೆಕ್ಟರ್ ಎಸ್.ಕೆ. ಕೃಷ್ಣ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿಶೇಷ ಪ್ರಕರಣ ಕುರಿತಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಸಲ್ಮಾನ್ ಪಾಷನಿಗೆ ಐಪಿಸಿ ಕಲಂ 354(ಡಿ) ಮತ್ತು ಫೋಕ್ಸೋ ಕಾಯ್ದೆ ಕಲಂ 12 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 363 ಮತ್ತು 366 ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 447 ಅಡಿಯಲ್ಲಿನ ಅಪರಾಧಕ್ಕೆ 3 ತಿಂಗಳ ಕಠಿಣ ಶಿಕ್ಷೆ ಮತ್ತು 500 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 15 ದಿನಗಳ ಸಾದಾ ಶಿಕ್ಷೆ.

ಐಪಿಸಿ ಕಲಂ 376ಎಬಿ ಮತ್ತು ಫೋಕ್ಸೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ 21 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷ ಕಠಿಣ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು.

andolana

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

5 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago