ಮಂಡ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 26 ವರ್ಷ ಶಿಕ್ಷೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ ಪಾಷಾ ಅವರ ಮಗ ಜಿ. ಸಲ್ಮಾನ್ ಪಾಷಾ (26) ಶಿಕ್ಷೆಗೊಳಗಾದ ಅಪರಾಧಿ.

ಆರೋಪಿ ಸಲ್ಮಾನ್ ಪಾಷ ಬಡಾವಣೆಯ ಬಾಲಕಿ ಶಾಲೆಗೆ ಮತ್ತು ಟ್ಯೂಷನ್‌ಗೆ ಹೋಗುವಾಗ ಮತ್ತು ಬರುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ತಿಂಡಿ ಕೊಟ್ಟು ಮಾತನಾಡಿಸುತ್ತಿದ್ದನು. ಆಕೆ ಪ್ರತಿದಿನ ಸಂಜೆ ಟ್ಯೂಷನ್‌ಗೆ ಹೋಗುವಾಗ ಆರೋಪಿಯು ಬಾಲಕಿಯನ್ನು ಯಾರೂ ಇಲ್ಲದ ಸಮಯದಲ್ಲಿ ತನ್ನ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

2022ನೇ ಜುಲೈ 3ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಬಾಲಕಿಯನ್ನು ರೂಂನ ಕಿಟಕಿಯ ಮೂಲಕ ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಗಿಫ್ಟ್ ಕೊಡುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಪ್ರಕರಣ ಕುರಿತಂತೆ ದೂರು ದಾಖಲಾದ ನಂತರ ಐಪಿಸಿ ಸೆಕ್ಷನ್‌ 354(ಡಿ), 366, 378(ಎಬಿ), 376 (2)(ಎನ್) ಐಪಿಸಿ & ಕಲಂ 6, 12 ಪೋಕ್ಸೋ ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಅಂದಿನ ಇನ್‌ಸ್ಪೆಕ್ಟರ್ ಎಸ್.ಕೆ. ಕೃಷ್ಣ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿಶೇಷ ಪ್ರಕರಣ ಕುರಿತಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಸಲ್ಮಾನ್ ಪಾಷನಿಗೆ ಐಪಿಸಿ ಕಲಂ 354(ಡಿ) ಮತ್ತು ಫೋಕ್ಸೋ ಕಾಯ್ದೆ ಕಲಂ 12 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 363 ಮತ್ತು 366 ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 447 ಅಡಿಯಲ್ಲಿನ ಅಪರಾಧಕ್ಕೆ 3 ತಿಂಗಳ ಕಠಿಣ ಶಿಕ್ಷೆ ಮತ್ತು 500 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 15 ದಿನಗಳ ಸಾದಾ ಶಿಕ್ಷೆ.

ಐಪಿಸಿ ಕಲಂ 376ಎಬಿ ಮತ್ತು ಫೋಕ್ಸೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ 21 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷ ಕಠಿಣ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago