ಮಂಡ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 26 ವರ್ಷ ಶಿಕ್ಷೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ ಪಾಷಾ ಅವರ ಮಗ ಜಿ. ಸಲ್ಮಾನ್ ಪಾಷಾ (26) ಶಿಕ್ಷೆಗೊಳಗಾದ ಅಪರಾಧಿ.

ಆರೋಪಿ ಸಲ್ಮಾನ್ ಪಾಷ ಬಡಾವಣೆಯ ಬಾಲಕಿ ಶಾಲೆಗೆ ಮತ್ತು ಟ್ಯೂಷನ್‌ಗೆ ಹೋಗುವಾಗ ಮತ್ತು ಬರುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ತಿಂಡಿ ಕೊಟ್ಟು ಮಾತನಾಡಿಸುತ್ತಿದ್ದನು. ಆಕೆ ಪ್ರತಿದಿನ ಸಂಜೆ ಟ್ಯೂಷನ್‌ಗೆ ಹೋಗುವಾಗ ಆರೋಪಿಯು ಬಾಲಕಿಯನ್ನು ಯಾರೂ ಇಲ್ಲದ ಸಮಯದಲ್ಲಿ ತನ್ನ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

2022ನೇ ಜುಲೈ 3ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಬಾಲಕಿಯನ್ನು ರೂಂನ ಕಿಟಕಿಯ ಮೂಲಕ ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಗಿಫ್ಟ್ ಕೊಡುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಪ್ರಕರಣ ಕುರಿತಂತೆ ದೂರು ದಾಖಲಾದ ನಂತರ ಐಪಿಸಿ ಸೆಕ್ಷನ್‌ 354(ಡಿ), 366, 378(ಎಬಿ), 376 (2)(ಎನ್) ಐಪಿಸಿ & ಕಲಂ 6, 12 ಪೋಕ್ಸೋ ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಅಂದಿನ ಇನ್‌ಸ್ಪೆಕ್ಟರ್ ಎಸ್.ಕೆ. ಕೃಷ್ಣ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿಶೇಷ ಪ್ರಕರಣ ಕುರಿತಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಸಲ್ಮಾನ್ ಪಾಷನಿಗೆ ಐಪಿಸಿ ಕಲಂ 354(ಡಿ) ಮತ್ತು ಫೋಕ್ಸೋ ಕಾಯ್ದೆ ಕಲಂ 12 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 363 ಮತ್ತು 366 ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಐಪಿಸಿ ಕಲಂ 447 ಅಡಿಯಲ್ಲಿನ ಅಪರಾಧಕ್ಕೆ 3 ತಿಂಗಳ ಕಠಿಣ ಶಿಕ್ಷೆ ಮತ್ತು 500 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 15 ದಿನಗಳ ಸಾದಾ ಶಿಕ್ಷೆ.

ಐಪಿಸಿ ಕಲಂ 376ಎಬಿ ಮತ್ತು ಫೋಕ್ಸೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ 21 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷ ಕಠಿಣ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

36 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago