ಮಂಡ್ಯ

ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ : ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳ ಅಟ್ಟಹಾಸ

ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.

ಮೃತನನ್ನು ಮೈಸೂರಿನ ಕುವೆಂಪು ನಗರದ ನಿವಾಸಿ ರಂಗಸ್ವಾಮಿ ಎಂಬವರ ಮಗ ರಮೇಶ್(೩೧) ಎಂದು ಗುರುತಿಸಲಾಗಿದೆ. ಕಳೆದ ಏಳೆಂಟು ವರ್ಷಗಳಿಂದ ಮನೆಯಲ್ಲಿ ಜಗಳ ಮಾಡಿಕೊಂಡು ಮನೆಬಿಟ್ಟು ಹಲಗೂರಿನಲ್ಲಿ ಸಂಬಂಧಿಕನ ಜೊತೆ ಗಾರೆ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದರು. ನಂತರದ ಮೂರು-ನಾಲ್ಕು ವರ್ಷಗಳಿಂದ ಚಿಂದಿ ಹಾಗೂ ಪ್ಲಾಸ್ಟಿಕ್ ಬಾಟಲ್ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.

ಘಟನೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ದಿಂಡುಗಲ್ಲಿನಿಂದ ತಲೆಗೆ ಹೊಡೆದು ರಮೇಶ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿ ದೊರೆತ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್‌ಪಿ ಕೃಷ್ಣಪ್ಪ, ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್, ಕೆ.ಎಂ.ದೊಡ್ಡಿ ವೃತ್ತ ನಿರೀಕ್ಷಕ ಆನಂದ್, ಶ್ವಾನದಳ ಹಾಗೂ ಬೆರಳಚ್ಚು ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸ್ಥಳದಿಂದ ಸಾಕ್ಷ್ಯ, ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಹಾಗೂ ಬೆಳಕವಾಡಿ ಠಾಣೆಯ ಪಿಎಸ್‌ಐ ಪ್ರಕಾಶ್ ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

10 mins ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

11 mins ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

35 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

1 hour ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

1 hour ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

2 hours ago