ಮದ್ದೂರು: ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ.
ತಾಲ್ಲೂಕಿನ ನಗರಕೆರೆ ಗ್ರಾಮದ ನಿಂಗಯ್ಯ ಅವರ ಪುತ್ರ ಎನ್.ಎಲ್. ಲಿಂಗೇಗೌಡ ಉ. ಕುಳ್ಳಯ್ಯ (48) ಎಂಬಾತ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವಾರು ತಿಂಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಲಿಂಗೇಗೌಡ ನೋವನ್ನು ತಾಳಲಾರದೆ ಮನನೊಂದು ಗುರುವಾರ ರಾತ್ರಿ 7.30ರಲ್ಲಿ ಚನ್ನೇಗೌಡನ ದೊಡ್ಡಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಲಿಂಗೇಗೌಡರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದುಬಂದ ತಕ್ಷಣ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಗೆ ಸಾಗಿಸಿ, ಶವ ಪರೀಕ್ಷೆ ನಂತರ ವಾರಸುದಾರರಿಗೆ ನೀಡಿದರು. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…