Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಗಣೇಶ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ganesha dance hert attack

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್‌ ಮಾಡುತ್ತಿದ್ದರು.

ಗ್ರಾಮಸ್ಥರೊಂದಿಗೆ ಮಂಜುನಾಥ್‌ ಸಹ ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ಹಿಡಿದುಕೊಂಡು ಅವರು ಕುಸಿದುಬಿದ್ದಿದ್ದಾರೆ. ಜೊತೆಯಲ್ಲಿದ್ದವರು ನೋಡುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

Tags:
error: Content is protected !!