ಮದ್ದೂರು: ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಕಳೆದ ಭಾನುವಾರ ( ಮಾರ್ಚ್ 17 ) ಸಂಜೆ ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ತನ್ನ ಎರ್ಟಿಗಾ ಕಾರು ಚಾಲನೆ ಮಾಡಿದ್ದ ಧನಂಜಯ ಇತರೆ ವಾಹನ ಸವಾರರಿಗೆ ಆತಂಕ ಸೃಷ್ಟಿಸಿದ್ದ.
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಇದನ್ನು ಗಮನಿಸಿ ಪರಿಶೀಲಿಸಿದಾಗ ಧನಂಜಯ ಸೇರಿದಂತೆ ಕಾರಿನಲ್ಲಿದ್ದ ಇತರೆ ಐವರೂ ಸಹ ಮದ್ಯಪಾನ ಮಾಡಿರುವುದು ತಿಳಿದುಬಂದಿದೆ. ಇನ್ನು ತಪಾಸಣೆ ವೇಳೆ ಪೊಲೀಸರ ಜತೆ ಸಹ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ದೂರಿನ ಅನ್ವಯ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಈ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಿಯಾಂಕ ಕಾರು ಚಾಲಕ ಧನಂಜಯ ಹಾಗೂ ಆತನ ಸ್ನೇಹಿತರಿಗೆ ದಂಡ ವಿಧಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…