ಮದ್ದೂರು: ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಕಳೆದ ಭಾನುವಾರ ( ಮಾರ್ಚ್ 17 ) ಸಂಜೆ ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ತನ್ನ ಎರ್ಟಿಗಾ ಕಾರು ಚಾಲನೆ ಮಾಡಿದ್ದ ಧನಂಜಯ ಇತರೆ ವಾಹನ ಸವಾರರಿಗೆ ಆತಂಕ ಸೃಷ್ಟಿಸಿದ್ದ.
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಇದನ್ನು ಗಮನಿಸಿ ಪರಿಶೀಲಿಸಿದಾಗ ಧನಂಜಯ ಸೇರಿದಂತೆ ಕಾರಿನಲ್ಲಿದ್ದ ಇತರೆ ಐವರೂ ಸಹ ಮದ್ಯಪಾನ ಮಾಡಿರುವುದು ತಿಳಿದುಬಂದಿದೆ. ಇನ್ನು ತಪಾಸಣೆ ವೇಳೆ ಪೊಲೀಸರ ಜತೆ ಸಹ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ದೂರಿನ ಅನ್ವಯ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಈ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಿಯಾಂಕ ಕಾರು ಚಾಲಕ ಧನಂಜಯ ಹಾಗೂ ಆತನ ಸ್ನೇಹಿತರಿಗೆ ದಂಡ ವಿಧಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…