ಮದ್ದೂರು: ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಕಳೆದ ಭಾನುವಾರ ( ಮಾರ್ಚ್ 17 ) ಸಂಜೆ ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ತನ್ನ ಎರ್ಟಿಗಾ ಕಾರು ಚಾಲನೆ ಮಾಡಿದ್ದ ಧನಂಜಯ ಇತರೆ ವಾಹನ ಸವಾರರಿಗೆ ಆತಂಕ ಸೃಷ್ಟಿಸಿದ್ದ.
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಇದನ್ನು ಗಮನಿಸಿ ಪರಿಶೀಲಿಸಿದಾಗ ಧನಂಜಯ ಸೇರಿದಂತೆ ಕಾರಿನಲ್ಲಿದ್ದ ಇತರೆ ಐವರೂ ಸಹ ಮದ್ಯಪಾನ ಮಾಡಿರುವುದು ತಿಳಿದುಬಂದಿದೆ. ಇನ್ನು ತಪಾಸಣೆ ವೇಳೆ ಪೊಲೀಸರ ಜತೆ ಸಹ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ದೂರಿನ ಅನ್ವಯ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಈ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಿಯಾಂಕ ಕಾರು ಚಾಲಕ ಧನಂಜಯ ಹಾಗೂ ಆತನ ಸ್ನೇಹಿತರಿಗೆ ದಂಡ ವಿಧಿಸಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…