ಮಂಡ್ಯ

ಮದ್ದೂರು| ಹಣಕಾಸು ವಿಚಾರದಲ್ಲಿ ಕಲಹ: ವ್ಯಕ್ತಿಯ ಕುತ್ತಿಗೆ ಸೀಳಿ ಬರ್ಬರ ಹತ್ಯೆ

ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ.

ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೇಗೌಡ (47) ಎಂಬಾತನನ್ನು ಕೊಲೆಗೈದು ಪರಾರಿಯಾಗಿದೆ.

ಮದನಹಟ್ಟಿ ದೇವಾಲಯದ ಬಳಿ ಕೃಷ್ಣೇಗೌಡರ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿ ದುಷ್ಕೃತ್ಯ ಎಸಗಿದ್ದು, ಬೆಳ್ಳಂಬೆಳಗ್ಗೆ ಹರಿದ ನೆತ್ತರಿಗೆ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದಾರೆ. ಮಂಗಳವಾರ ಮುಂಜಾನೆ ಎಂದಿನಂತೆ ಡೈರಿಗೆ ತೆರಳಿ ಹಾಲು ಹಾಕಿ ಮನೆಗೆ ಬರುತ್ತಿದ್ದ ಕೃಷ್ಣೇಗೌಡ ತೋಟದ ಬಳಿ ಎಮ್ಮೆ ಕರು ಕಟ್ಟುತ್ತಿದ್ದಾಗ ಪ್ಲಾಟಿನಂ ಬೈಕಿನಲ್ಲಿ ಬಂದ ಮೂವರು ಏಕಾಏಕಿ ಮುಗಿಬಿದ್ದು, ಹೊಟ್ಟೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಕೆಳಕ್ಕೆ ಬಿದ್ದ ಕೃಷ್ಣೇಗೌಡರ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಣಕಾಸು ವಿಚಾರವಾಗಿ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಕೆ.ಎಂ.ದೊಡ್ಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಹತ್ಯೆಯಾದ ಕೃಷ್ಣೆಗೌಡರಿಗೆ ಇಬ್ಬರು ಮಕ್ಕಳು, ಪತ್ನಿ ಹಾಗೂ ತಾಯಿ ಇದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

20 hours ago