ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಗೌರವ ತೋರಿದ್ದಾರೆ.
ಭಾರತ ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಜಗತ್ತಿನಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ದೇಶದಾದ್ಯಂತ ಶೋಕಾಚರಣೆ ಆಚರಿಸಲಿದ್ದು, ರಾಜ್ಯದಲ್ಲಿಯೂ 7 ದಿನಗಳವರೆಗೆ ಶೋಕಾಚರಣೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ದೇಶಾದ್ಯಂತ 7 ದಿನ ಶೋಕಾಚರಣೆ ಇದ್ದರೂ ಕಾವೇರಿ ನಿಗಮದ ಅಧಿಕಾರಿಗಳು ಕೆಆರ್ಎಸ್ ಬೃಂದಾವನದಲ್ಲಿ ಮೋಜು ಮಸ್ತಿ ಮಾಡುವ ಮೂಲಕ ಸಂಗೀತ ಕಚೇರಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಪ್ರತಿನಿತ್ಯ ಸಂಜೆ 7 ರಿಂದ 8ರವರೆಗೆ ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಗುತ್ತದೆ. ಪ್ರಧಾನಿ ನಿಧನದ ನಡುವೆಯು ಎಂದಿನಂತೆ ಅಧಿಕಾರಿಗಳು ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಬಗ್ಗೆ ಕೆಲ ಸ್ಥಳಿಯರು ಹಾಗೂ ಅಲ್ಲಿನ ಪ್ರವಾಸಿಗರು ಪ್ರಶ್ನೆ ಕೇಳಿದ ನಂತರ ಎಚ್ಚೆತ್ತ ಅಧಿಕಾರಿಗಳು ಸಂಗೀತ ಕಾರಂಜಿ ಸ್ಥಗಿತಗೊಳಿಸಿ ಪ್ರವಾಸಿಗರನ್ನು ಅಲ್ಲಿಂದ ಕಳುಹಿಸಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…